Site icon BosstvKannada

ಕನ್ನಡಿಗನ ಹೋರಾಟ ವ್ಯರ್ಥ.. IPL ನಿಂದ GT ಔಟ್!

ಐಪಿಎಲ್ (IPL) 2025ರ ಎಲಿಮಿನೇಟರ್​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡ ಗೆಲುವು ಸಾಧಿಸಿದೆ. ಗುಜರಾತ್​ ಟೈಟಾನ್ಸ್​ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಮುಂಬೈ 20 ರನ್‌ಗಳಿಂದ ಜಯಗಳಿಸಿದೆ. ಭಾನುವಾರ ನಡೆಯಲಿರುವ ಕ್ವಾಲಿಫೈರ್ – 2 ​ಪಂದ್ಯದಲ್ಲಿ ಪಂಜಾಬ್ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಲಿವೆ.

ಶುಕ್ರವಾರ ಮುಲ್ಲನ್ಪುರ್​ ಮೈದಾನದಲ್ಲಿ ನಡೆದಿದ್ದ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಹಾರ್ದಿಕ್ ಪಡೆ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 228‌ ರನ್​ಗಳನ್ನು ಕಲೆ ಹಾಕಿತು. ಈ ಬೃಹತ್ ಮೊತ್ತದ ಚೇಸಿಂಗ್‌ನಲ್ಲಿ ಗುಜರಾತ್ ತಂಡ ಹೋರಾಡಿ ಸೋಲು ಕಂಡಿತು. 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 208 ರನ್ ಗಳಿಸಿತು. ಸಾಯಿ ಸುದರ್ಶನ್ ೮೦ ರನ್ ಮತ್ತು ವಾಷಿಂಗ್ಟನ್ ಸುಂದರ್‌ 48 ಅವರ ಅದ್ಭುತ ಪ್ರದರ್ಶನದ ಹೊರತಾಗಿಯೂ, ಗುಜರಾತ್ ಪಂದ್ಯ ಗೆಲ್ಲಲು ಸಾಧ್ಯವಾಗಲಿಲ್ಲ.

ಡೆತ್​ ಓವರ್​ನಲ್ಲಿ ಮುಂಬೈ ಬೌಲರ್‌ಗಳು ರನ್‌ಗಳನ್ನು ನಿಯಂತ್ರಿಸುತ್ತಿದ್ದಂತೆ, ಗುಜರಾತ್​ ರನ್​ ವೇಗಕ್ಕೆ ಬ್ರೇಕ್​ ಬಿತ್ತು. ಮುಂಬೈ ಬೌಲರ್‌ಗಳಲ್ಲಿ ಟ್ರೆಂಟ್ ಬೌಲ್ಟ್ 2 ವಿಕೆಟ್ ಪಡೆದರೆ, ಬುಮ್ರಾ, ರಿಚರ್ಡ್ ಗ್ಲೀಸನ್, ಸ್ಯಾಂಟ್ನರ್ ಮತ್ತು ಅಶ್ವನಿ ಕುಮಾರ್ ತಲಾ ಒಂದು ವಿಕೆಟ್ ಉರುಳಿಸಿದರು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಪರ ರೋಹಿತ್ ಶರ್ಮಾ 50 ಎಸೆತಗಳಲ್ಲಿ 9 ಬೌಂಡರಿ, 4 ಸಿಕ್ಸರ್ ಸಹಾಯದಿಂ 81ರನ್​ ಚಚ್ಚಿದರು. ಆರಂಭದಲ್ಲಿ ಎರಡು ವರದಾನ ಪಡೆದ ರೋಹಿತ್ ನಂತರ ಬೌಂಡರಿಗಳೊಂದಿಗೆ ಸಿಡಿದೆದ್ದರು. ಕೇವಲ 28 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಈ ಸೀಸನ್​ನಲ್ಲಿ ಗುಜರಾತ​ ಟೈಟಾನ್ಸ್​ ತಂಡದ ಪರ ಅದ್ಭತ ಪ್ರದರ್ಶನ ನೀಡಿದ ಕನ್ನಡಿಗ ಪ್ರಸಿದ್ಧ್​ ಕೃಷ್ಣ ಟೂರ್ನಿ ಉದ್ಧಕ್ಕೂ ಉತ್ತಮ ಬೌಲಿಂಗ್​ ಮಾಡಿ ಹೆಚ್ಚು ವಿಕೆಟ್​ಗಳನ್ನು ಪಡೆದಿದ್ದಾರೆ. ಅವರು 15 ಪಂದ್ಯಗಳಲ್ಲಿ 25 ವಿಕೆಟ್​ ಉರುಳಿಸಿ ಮೊದಲ ಸ್ಥಾನದಲ್ಲಿದ್ದಾರೆ. ಜೊತೆಗೆ ಪರ್ಪಲ್ ಕ್ಯಾಪ್​ ಸಹ ಹೊಂದಿದ್ದಾರೆ. ಆದರೆ ಇವರ ಹೋರಾಟ ನಿನ್ನೆ ಕೊನೆಗೊಂಡಿದೆ.

Exit mobile version