ನಟ ದರ್ಶನ್ ಅಭಿಮಾನಿಗಳಿಗೆ ಪತ್ರ ಬರೆದಿದ್ದು, ಅದನ್ನು ಪತ್ನಿ ವಿಜಯಲಕ್ಷ್ಮೀ ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.
ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ಡಿ. 11ರಂದು ಬಿಡುಗಡೆಯಾಗಲಿದೆ. ಹೀಗಾಗಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದ್ದರಿಂದಾಗಿ ಯಾವುದೇ ಅಚಾತುರ್ಯ ನಡೆಯಬಾರದು ಎಂಬ ಕಾರಣಕ್ಕೆ ಅಭಿಮಾನಿಗಳಲ್ಲಿ ಮನವಿ ಮಾಡಿ ಪತ್ರ ಬರೆದಿದ್ದಾರೆ.
ನನ್ನ ಹೃದಯದಿಂದ ಈ ಸಂದೇಶ ನಿಮಗೆ ಕಳುಹಿಸುತ್ತಿದ್ದೇನೆ. ವಿಜಿ ನಿಮ್ಮೆಲ್ಲರಿಗೂ ಇದನ್ನು ತಲುಪಿಸುತ್ತಾಳೆ. ನಿಮ್ಮೆಲ್ಲರ ಪ್ರೀತಿ, ಕಾಳಜಿ, ಬೆಂಬಲ, ನನ್ನ ಸಿನಿಮಾ ಪ್ರಚಾರ ಬಗ್ಗೆ ಪ್ರತಿ ಬಾರಿಯೂ ವಿಜಿ ನನಗೆ ತಿಳಿಸುತ್ತಿದ್ದಾಳೆ. ದೂರ ಇದ್ದರೂ ಪ್ರತಿ ಕ್ಷಣವೂ ನಿಮ್ಮ ಉಪಸ್ಥಿತಿಯನ್ನು ನಾನು ಅನುಭವಿಸುತ್ತೇನೆ. ನಾನು ನಿಮಗೆ ಹೇಳಲು ಬಯಸುವುದೇನೆಂದರೆ ದಯವಿಟ್ಟು ಯಾರು ಏನು ಹೇಳಿದರೂ ಚಿಂತಿಸಬೇಡಿ.
ಯಾವುದೇ ವದಂತಿ, ನೆಗೆಟಿವಿಟಿ ನಿಮ್ಮ ಹೃದಯವನ್ನು ಅಲುಗಾಡಿಸಲು ಬಿಡಬೇಡಿ’.ನೀವು ನನ್ನ ಶಕ್ತಿ, ನೀವು ನನ್ನ ಕುಟುಂಬ. ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿ ನಾನು ನಿಂತಿದ್ದೇನೆ. ನನ್ನ ಜೀವನದ ಈ ಹಂತದಲ್ಲಿ, ನನ್ನ ದೊಡ್ಡ ಶಕ್ತಿ ನೀವೇ. ಈ ಸಮಯದಲ್ಲಿ ನಾನು ಬಯಸುವುದು ಒಂದೇ . ನಮ್ಮ ಡೆವಿಲ್ ಸಿನಿಮಾ ಕಡೆಗೆ ಗಮನ ಹರಿಸಬೇಕು. ನನಗೆ ತೋರಿಸಿದ ಪ್ರೀತಿಯನ್ನು ಡೆವಿಲ್ಗೂ ತೋರಿಸಿ. ನನ್ನ ಅನುಪಸ್ಥಿತಿಯಲ್ಲಿಯೂ ಸಹ, ನೀವು ಪ್ರತಿಯೊಂದು ಪ್ರಶ್ನೆಗೆ, ಅನುಮಾನಕ್ಕೆ, ಧ್ವನಿಗೆ ಉತ್ತರಿಸಬೇಕೆಂದು ನಾನು ಬಯಸುತ್ತೇನೆ. ಪದಗಳಿಂದಲ್ಲ, ಆದರೆ ಈ ಚಿತ್ರದ ಅದ್ಭುತ ಯಶಸ್ಸಿನೊಂದಿಗೆ’ ಎಂದು ದರ್ಶನ್ ಹೇಳಿದ್ದಾರೆ.
ನನ್ನ ಸಿನಿಮಾಗೆ ನೀವು ಮಾಡುತ್ತಿರುವ ಪ್ರಚಾರ, ಶ್ರಮ ಮತ್ತು ನಿಮ್ಮ ಒಗ್ಗಟನಿನ ಬಗ್ಗೆ ಕೇಳಿದಾಗ ನನಗೆ ಹೆಮ್ಮೆ ಮತ್ತು ಭಾವುಕನಗುತ್ತೇನೆ. ನಿಮ್ಮನ್ನೆಲ್ಲ ಮತ್ತೆ ಭೇಟಿಯಾಗುವ ದಿನಕ್ಕಾಗಿ ಕಾಯುತ್ತಿರೋದೇ ಖುಷಿ ಕೊಡ್ತಿದೆ. ನನ್ನ ಸುತ್ತಲೂ ಗೋಡೆಯಂತೆ ನಿಂತಿದ್ದಕ್ಕಾಗಿ ಧನ್ಯವಾದಗಳು. ನೀವು ನನ್ನನ್ನು ಎಷ್ಟು ನಂಬುತ್ತಿರೋ ನಾನು ನನ್ನ ಸೆಲೆಬ್ರಿಟಿಗಳನ್ನ ಅಷ್ಟೇ ನಂಬುತ್ತಿನಿ . ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಎಲ್ಲವನ್ನೂ ಉತ್ತರಿಸುತ್ತದೆ. ಅಲ್ಲಿವರೆಗೂ ತಲೆಯನ್ನೆತ್ತಿ, ಹೃದಯ ಬಲವಾಗಿರಲಿ, ಪ್ರೀತಿ ಅಚಲವಾಗಿರಲಿ’ ಎಂದು ದರ್ಶನ್ ಅಭಿಮಾನಿಗಳಿಗೆ ಸಂದೇಶ ಕಳುಹಿಸಿದ್ದಾರೆ.
