ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ಇಡಿ ಅಧಿಕಾರಿಗಳಿಂದ ನೋಟಿಸ್ ಜಾರಿಯಾಗಿದೆ. ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ ಈ ಹಿನ್ನಲೆಯಲ್ಲಿ ಹಲವು ಶಾಕಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಇಡಿ ವಿಚಾರಣೆಗೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಮಹಿಳೆ ನನ್ನ ಸಹೋದರಿ ಅಂತಾ ಹೇಳಿದ್ದಾರೆ. ನನ್ನ ಕ್ಷೇತ್ರದವರು ಹಲವು ಭಾರಿ ನನ್ನನ್ನ ಭೇಟಿಯಾಗಿದ್ದಾರೆ. ನಾನು ಅವರ 2 ಕಾರ್ಯಕ್ರಮಗಳಿಗೆ ಭೇಟಿ ನೀಡಿದ್ದೆ. ಆದನ್ನು ಹೊರತುಪಡಿಸಿ ಬೇರೆನು ಇಲ್ಲ ಎಂದರು.
ಇನ್ನು ವಿಷಯಕ್ಕೆ ಸಂಬಂಧ ಇಲ್ಲದ್ದು ನನಗೆ ಕನೆಕ್ಟೆಡ್ ಇಲ್ಲದೇ ಇರೋ ವಿಚಾರಗಳು ಇದ್ವು.. ಯಾಕೆ ನೋಟಿಸ್ ಕೊಟ್ಟರು ಅನ್ನೋದು ಗೊತ್ತಿಲ್ಲ.. ಹಾಗಾಗಿ ಯಾಕೆ ನೋಟಿಸ್ ಕೊಟ್ಟಿದ್ದಾರೆ ಅನ್ನೋದು ವಿಚಾರಣೆಗೆ ಹೋದ ಮೇಲೆ ಗೊತ್ತಾಗುತ್ತೆ.. ವಿಚಾರಣೆಗೆ ಸಂಪೂರ್ಣ ಸಹಕಾರ ಕೊಡುತ್ತೇನೆ. ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ ಜಾರಿ ಮಾಡಿದ್ರು. ಕೆಲ ಮಾಹಿತಿಗಳನ್ನ ಕೇಳಿದ್ರು, ನಮ್ಮ ವಕೀಲರ ಜೊತೆಗೆ ವಿಚಾರಣೆಗೆ ಹಾಜರಾಗುತ್ತಿದ್ದೇನೆ ಎಂದು ಹೇಳಿದರು.
ಇಡಿ ಎಂಟ್ರಿ ಆಗಿದೆ,ಯಾವ ಮಾನದಂಡ ಇಟ್ಟುಕೊಂಡು ನನ್ನನ್ನು ಕರೆದಿದ್ದಾರೆ ಗೊತ್ತಿಲ್ಲ. ಇಡಿ ನೋಟಿಸೇ ಪ್ರಶ್ನೆಯಾಗಿದೆ. ಸುಪ್ರೀಂ ಕೋರ್ಟ್ ಹೈಕೋರ್ಟ್ ಅನೇಕ ಬಾರಿ ಇಡಿ ಬಗ್ಗೆ ಹೇಳಿದೆ. ವ್ಯಾಪ್ತಿ ಮೀರಿ ಇಡಿ ನಡಿತಾ ಇದೆ ಅಂತ ಹೇಳಿದೆ. ಆದಾಗ್ಯೂ ಎಚ್ಚೆತ್ತು ಕೊಳ್ಳಲಿಲ್ಲ ಅಂದ್ರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಬರುತ್ತಿದೆ ಎಂದು ಅರ್ಥ. ಇಡಿ ತನಿಖೆ ವ್ಯಾಪ್ತಿ ಹೊರತುಪಡಿಸಿ ಕೇಸ್ ದಾಖಲಿಸಿಕೊಳ್ಳುತ್ತಿದೆ. ಇಡಿ ಕೇಂದ್ರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಡಿಕೆ ಸುರೇಶ್ ಕಿಡಿಕಾರಿದರು.