ಕಾಂಗ್ರೆಸ್ ಹೈಕಮಾಂಡ್ ನಮಗೆ ದೇವಸ್ಥಾನ ಇದ್ದ ಹಾಗೆ, ಸಮಯ ಸಿಕ್ಕರೆ ಹೈಕಮಾಂಡ್ ಭೇಟಿಯಾಗಿ ಅವರಿಗೆ ಕೈ ಮುಗಿದು ಬರುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಎರಡು ದಿನ ದೆಹಲಿ ಪ್ರವಾಸ ಕೈಗೊಳ್ಳುತ್ತಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಎತ್ತಿನಹೊಳೆ ಯೋಜನೆ ಸಂಬಂಧಿಸಿದಂತೆ ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾಗಬೇಕು. ತುಮಕೂರು ಮತ್ತು ಹಾಸನ ವಿಚಾರದಲ್ಲಿ ಕೇಂದ್ರ ಅನುಮತಿ ಕೊಡಬೇಕಿದೆ. ಈ ವಿಷಯದ ಕುರಿತು ಚರ್ಚೆಗೆ ಅವಕಾಶ ಕೊಟ್ಟಿದ್ದಾರೆ. ಅರಣ್ಯ ಸಚಿವರ ಜೊತೆ ಕೇಂದ್ರ ಜಲ ಸಂಪನ್ಮೂಲ ಸಚಿವರು ಸಮಯ ಕೊಟ್ಟಿದ್ದಾರೆ. ಅವರ ಜೊತೆಗೂ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.
ಇನ್ನು ಕಾಂಗ್ರೆಸ್ ಹೈಕಮಾಂಡ್ ಅನ್ನೋದು ನಮಗೆ ದೇವಸ್ಥಾನ ಇದ್ದ ಹಾಗೆ. ಅವಕಾಶ ಸಿಕ್ಕರೆ ಭೇಟಿ ಆಗಿ ಕೈ ಮುಗಿದು ಬರುತ್ತೇವೆ ಎಂದು ತಿಳಿಸಿದರು.
