Site icon BosstvKannada

ಆನಂದ ಗುರೂಜಿ Car ಅಡ್ಡಗಟ್ಟಿ ಹಣಕ್ಕಾಗಿ ಬ್ಲ್ಯಾಕ್ ಮೇಲ್; ಕೇಸ್‌ ದಾಖಲು!

ಹಣಕ್ಕಾಗಿ ವ್ಯಕ್ತಿ ಯಾವ ಮಟ್ಟಕ್ಕೂ ಇಳಿತಾರೇ ಅನ್ನೋದಕ್ಕೆ ಮತ್ತೊಂದು ಘಟನೆ ಬೆಂಗಳೂರಲ್ಲಿ ನಡೆದಿದೆ. ಪ್ರಖ್ಯಾತ ಆನಂದ್ ಗುರೂಜಿಗೆ ಪ್ರತಿನಿತ್ಯ ಹಣಕ್ಕಾಗಿ ಆರೋಪಿಗಳು ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ. ಆನಂದ ಗುರೂಜಿ Car ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದಿಸಿ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್ ಹಾಗೂ ಜೀವಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಈ ಸಂಬಂಧ ಆನಂದ ಗುರೂಜಿ ಅವರು ಬೆಂಗಳೂರಿನ (Bengaluru) ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪೊಲೀಸರು ಕೃಷ್ಣಮೂರ್ತಿ(A1) ಹಾಗೂ ದಿವ್ಯಾ ವಸಂತ (A2) ವಿರುದ್ಧ ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ.

ಆನಂದ ಗುರೂಜಿ ಅಶ್ಲೀಲ ವಿಡಿಯೋ ಹಾಗೂ ಜಮೀನು ಖರೀದಿ ಪ್ರಕರಣ ಸಂಬಂಧ ಕೋರ್ಟ್​ನಿಂದ ತಡೆಯಾಜ್ಞೆ ತರಲಾಗಿದೆ. ಆದರೂ ಸಹ ಈ ಪ್ರಕರಣ ಸಂಬಂಧ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್, ಜೀವಬೆದರಿಕೆ ಹಾಕಿದ್ದಾರೆ ಅಲ್ಲದೇ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂದು ಆನಂದ ಗುರೂಜಿ ದೂರಿನಲ್ಲಿ ಆರೋಪಿಸಿದ್ದಾರೆ.

Also Read: Gold rate today ; ಗೋಲ್ಡ್‌ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ..!

ವೀಡಿಯೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ. ಹಲವಾರು ಯುಟ್ಯೂಬ್ ಚಾನೆಲ್ ಗಳ ಮೂಲಕ ಮಾನಹಾನಿ ಮಾಡಿದ್ದು, ನನ್ನ ಚಾರಿತ್ರ್ಯ ತೇಜೋವಧೆ ಮಾಡಿದ್ದಾರೆ ಎಂದು ಆನಂದ ಗುರೂಜಿ ಆರೋಪಿಸಿದ್ದಾರೆ. ಸದ್ಯ ಚಿಕ್ಕಜಾಲ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

Exit mobile version