ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಹೆಚ್ಚಾಗುತ್ತಿರುವ ಮಧ್ಯೆ ಪರಿಸ್ಥಿತಿಯ ಲಾಭ ಮಾಡಿಕೊಳ್ಳಲು ಪಾಕ್ ಮುಂದಾಗಿದೆ ಎಂದು ತಿಳಿದು ಬಂದಿದೆ. ಬಾಂಗ್ಲಾದೇಶದ ಮಾರ್ಗವಾಗಿ ಪಾಕಿಸ್ತಾನದ ಭಯೋತ್ಪಾದನಾ ಗುಂಪುಗಳು ಭಾರತದ ಒಳಗೆ ನುಗ್ಗಲು ಪ್ರಯತ್ನಿಸುತ್ತಿವೆ ಎಂಬ ಗುಪ್ತಚರ ಮಾಹಿತಿ ಲಭ್ಯವಾಗಿ. ಹೀಗಾಗಿ ಭಾರತೀಯ ಭದ್ರತಾ ಸಂಸ್ಥೆಗಳು ಅಲರ್ಟ್ ಆಗಿವೆ.

ಢಾಕಾದಲ್ಲಿ ಹೆಚ್ಚಾದ ಅಶಾಂತಿಯ ನಡುವೆ ಬಾಂಗ್ಲಾದೇಶ ಕಾರಿಡಾರ್ ಮೂಲಕ ಭಾರತಕ್ಕೆ ಭಯೋತ್ಪಾದಕರನ್ನು ನುಸುಳಿಸಲು ಐಎಸ್ಐ ಯೋಜಿಸುತ್ತಿದೆ ಎಂದು ಗುಪ್ತಚರ ವರದಿ ಹೇಳಿವೆ. ಬಾಂಗ್ಲಾ ಹಿಂಸಾಚಾರ ಲಾಭ ಮಾಡಿಕೊಳ್ಳಲು ಮುಂದಾಗಿರುವ ಪಾಕ್ ತನ್ನ ಕುತಂತ್ರ ಬುದ್ಧಿ ತೋರಿಸಲು ಮುಂದಾಗಿದೆ. ಅಸ್ಸಾಂ, ತ್ರಿಪುರ ಮತ್ತು ಪಶ್ಚಿಮ ಬಂಗಾಳದ ಮೂಲಕ ಭಾರತಕ್ಕೆ ನುಸುಳಲು ಹಲವಾರು ಭಯೋತ್ಪಾದಕರು ಪಾಕಿಸ್ತಾನಿ ಏಜೆನ್ಸಿಗಳಿಂದ ತರಬೇತಿ ಪಡೆದಿದ್ದಾರೆ ಎನ್ನಲಾಗಿದೆ. ಬಡ ಸಮುದಾಯಗಳು ಮತ್ತು ರೋಹಿಂಗ್ಯಾ ನಿರಾಶ್ರಿತರು ಸೇರಿದಂತೆ ಬಾಂಗ್ಲಾದೇಶದ ದುರ್ಬಲ ಜನರಿಗೆ ಜಿಹಾದ್‌ನಲ್ಲಿ ಭಾಗವಹಿಸಲು ಮತ್ತು ಭಾರತಕ್ಕೆ ಪ್ರವೇಶಿಸಲು ಹಣದ ಆಮಿಷವೊಡ್ಡಲಾಗುತ್ತಿದೆ ಎಂದು ವರದಿಯಾಗುತ್ತಿದೆ.

ಎಲ್‌ಇಟಿ ಮತ್ತು ಜೆಇಎಂಗೆ ಸಂಬಂಧಿಸಿದ ಹಲವಾರು ಉಗ್ರರು ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಸಶಸ್ತ್ರ ಪಡೆಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

Share.
Leave A Reply