ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ದುರಂತದ ಬಳಿಕ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳು ನಡೆಯುತ್ತವೋ, ಇಲ್ಲವೋ ಎನ್ನುವ ಅನುಮಾನ ಇದ್ದವು. ಜೂನ್ 4 ರಂದು ಆರ್ಸಿಬಿ ವಿಜಯೋತ್ಸವದ ಸಮಾರಂಭದಲ್ಲಿ ಕಾಲ್ತುಳಿತ ಸಂಭವಿಸಿ 11 ಜನ ಉಸಿರು ಚೆಲ್ಲಿದ್ದರು. ಇದಾದ ಮೇಲೆ ಚಿನ್ನಸ್ವಾಮಿಯಲ್ಲಿ ಪಂದ್ಯಗಳು ನಡೆಯಲ್ಲ ಎನ್ನಲಾಗಿತ್ತು. ಆದರೆ ಇದೀಗ ಕೆಎಸ್ಸಿಎ ಟ್ರೋಫಿಯ ಪಂದ್ಯಗಳು ನಡೆಯಲಿವೆ ಎಂದು ಹೇಳಲಾಗಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೆಎಸ್ಸಿಎ ಕೆ ತಿಮ್ಮಪ್ಪಯ್ಯ ಮೆಮೊರಿಯಲ್ ಟ್ರೋಫಿಯನ್ನು ಆಯೋಜನೆ ಮಾಡಿದೆ. ಇದು ರೆಡ್ ಬಾಲ್ ಪ್ರಿ-ಸೀಸನ್ ಟೂರ್ನ್ಮೆಂಟ್ ಆಗಿದ್ದು ಒಟ್ಟು 16 ಟೀಮ್ಗಳು ಇದರಲ್ಲಿ ಭಾಗವಹಿಸಲಿವೆ. ಪಂದ್ಯ ನಡೆಯುವ ವೇಳೆ ಸುರಕ್ಷತೆ ಕಾರಣದಿಂದ ಅಭಿಮಾನಿಗಳಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಲಾಗಿದೆ.
ಸೆಪ್ಟೆಂಬರ್ 26 ರಿಂದ ಒಟ್ಟು 6 ಪಂದ್ಯಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿವೆ. ಇದರಲ್ಲಿ ಸೆಮಿ ಫೈನಲ್ ಹಾಗೂ ಫೈನಲ್ ಮ್ಯಾಚ್ಗಳು ಕೂಡ ಸೇರಿವೆ. ಮುಂಬೈ, ವಿದರ್ಭ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಹಾಗೂ ಛತ್ತೀಸ್ಘಡ ತಂಡಗಳು ಭಾಗಿಯಾಗಲಿವೆ.
ಮೊನ್ನೆ ಮೊನ್ನೆ ಬೆಂಗಳೂರು ಪೊಲೀಸರು ಅನುಮತಿ ನಿರಾಕರಣೆ ಮಾಡಿದ್ದರಿಂದ ಟಿ20 ಮಹಾರಾಜ ಟ್ರೋಫಿಯನ್ನು ಮೈಸೂರಿನಲ್ಲಿ ಆಯೋಜನೆ ಮಾಡಲಾಗಿತ್ತು. ದೊಡ್ಡ ದೊಡ್ಡ ಸಮಾರಂಭಗಳಿಗೆ ಚಿನ್ನಸ್ವಾಮಿ ಸ್ಟೇಡಿಯಂ ಸುರಕ್ಷತವಾಗಿಲ್ಲ ಎಂದು ಇತ್ತೀಚೆಗೆ ಕರ್ನಾಟಕ ಸರ್ಕಾರ ಹೊಸ ಕ್ರಿಕೆಟ್ ಸ್ಟೇಡಿಯಂ ಅನ್ನು ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದೆ. ಇದು 75 ಎಕೆರೆಯಲ್ಲಿ ನಿರ್ಮಾಣವಾಗಲಿದ್ದು, 60 ಸಾವಿರ ಆಸನಗಳನ್ನು ಒಳಗೊಂಡಿರಲಿದೆ.
Read Also : ಕ್ರಿಕೆಟ್ಗೆ ಮತ್ತೊಬ್ಬ ಆಟಗಾರ ವಿದಾಯ.. ನಿವೃತ್ತಿ ಘೋಷಿಸಿದ ಅಮಿತ್ ಮಿಶ್ರಾ..!
