Subscribe to Updates
Get the latest creative news from FooBar about art, design and business.
Author: Bosstv News Desk
ಉಡುಪಿ: ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ಗೀತೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ರಾಜ್ಯಕ್ಕೆ ಬಂದಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ (Sri Krishna Mutt) ಗೀತೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಮಾರೋಪ ಸಮಾರಂಭಕ್ಕೆ ಪವನ್ ಕಲ್ಯಾಣ್ ಆಗಮಿಸಿದ್ದಾರೆ. ಪರ್ಯಾಯ ಪುತ್ತಿಗೆ ಮಠಾಧೀಶರ ನೇತೃತ್ವದಲ್ಲಿ ಗೀತೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಈ ಗೀತೋತ್ಸವ ಕಾರ್ಯಕ್ರಮವು ಕಳೆದ ತಿಂಗಳಿನಿಂದ ನಡೆಯುತ್ತಿದ್ದು, ಪೇಜಾವರ ಶ್ರೀ ಉದ್ಘಾಟಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಂದು ಇಡೀ ಉಡುಪಿ ಕೇಸರಿಮಯವಾಗಿತ್ತು. ಈಗ ಇದೇ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಆಗಮಿಸಿದ್ದಾರೆ. ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ್ದ ಅವರು ಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಮಾಡಲಿದ್ದಾರೆ. ಆನಂತರ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ನಂತರ ಗೀತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಉಡುಪಿಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಕಾರವಾರ: ಪೀಠೋಪಕರಣ (Furniture Store) ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ (Short Circuit) ಉಂಟಾದ ಪರಿಣಾಮ ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಘಟನೆಯೊಂದು ನಡೆದಿದೆ. ಈ ಘಟನೆ ಉತ್ತರ ಕನ್ನಡ(Uttara Kannada) ಜಿಲ್ಲೆಯ ಮುಂಡಗೋಡ(Mundagodu)ದ ಕಿಲ್ಲೆ ಓಣಿಯ ಖಾದರ್ಲಿಂಕ್ ಹತ್ತಿರ ನಡೆದಿದೆ. ಕಿಲ್ಲೆ ಓಣಿಯ ಯೂನುಸ್ ಹೊಸಕೊಪ್ಪ ಎಂಬ ವ್ಯಕ್ತಿಗೆ ಸೇರಿದ್ದ ಪೀಠೋಪಕರಣದ ಮಹಿಳೆ ಹಾಗೂ ಅಯಾನ್ ಹಾನಗಲ್ ಎಂಬುವರಿಗೆ ಸೇರಿದ ಹಾರ್ಡವೇರ್ ಮಳಿಗೆಗೆಳಿಗೆ ಬೆಂಕಿ ತಗುಲಿದ್ದು, ಸುಮಾರು 50 ಲಕ್ಷ ರೂ.ಗೂ ಅಧಿಕ ಪ್ರಮಾಣದ ನಷ್ಟ ಉಂಟಾಗಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ಬೆಲೆಬಾಳುವ ಕಟ್ಟಿಗೆ ತುಂಡು, ಪೀಠೋಪಕರಣ ಹಾಗೂ ಕಾರು ಬೆಂಕಿಗೆ ಆಹುತಿಯಾಗಿವೆ. ಅಲ್ಲದೇ, ಅಕ್ಕಪಕ್ಕದ ಮಳಿಗೆಗಳಿಗೂ ಬೆಂಕಿ ಆವರಿಸುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದ್ದಾರೆ. ಹೀಗಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡ ಟೆಸ್ಟ್ ಸರಣಿ ಸೋತ ನಂತರ ಏಕದಿನ ಸರಣಿ ಗೆದ್ದು ಬೀಗಿದೆ. ಈಗ ತಂಡದ ಮುಂದೆ ಮತ್ತೊಂದು ಸವಾಲು ಇದ್ದು, ಟಿ20 ಗೆಲ್ಲುವ ಉತ್ಸಾಹದಲ್ಲಿದೆ. ಈಗಾಗಲೇ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದಿದೆ. ಈಗ ಎರಡೂ ತಂಡಗಳ ಮಧ್ಯೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಟೂರ್ನಿ ಡಿ. 9ರಿಂದ ಆರಂಭವಾಗಲಿದೆ. ಪ್ರತಿಯೊಂದು ಪಂದ್ಯ ಸಂಜೆ 6.30ಕ್ಕೆ ಆರಂಭವಾಗಲಿವೆ. ಟಿ20 ವಿಶ್ವಕಪ್ 2026 ರ ಹೊಸ್ತಿಲಿನಲ್ಲಿ ಈ ಸರಣಿಯು ಹೆಚ್ಚಿನ ಮಹತ್ವ ಪಡೆದಿದೆ. ಹೀಗಾಗಿ ಈ ಟೂರ್ನಿ ಆಟಗಾರರಿಗೆ ಹೆಚ್ಚಿನ ಮಹತ್ವ ಪಡೆದಿದೆ. ಆಟಗಾರರು ಉತ್ತಮ ಪ್ರದರ್ಶನ ತೋರಿ ಆಯ್ಕೆದಾರರ ಮನ ಗೆಲ್ಲಲು ಮುಂದಾಗಿದ್ದಾರೆ. ಏಕದಿನ ಸರಣಿಯಲ್ಲಿ ತವರಿನಲ್ಲಿ ಪ್ರಾಬಲ್ಯ ಕಾಯ್ದುಕೊಂಡಿದ್ದ ಭಾರತ ತಂಡ ಈಗ ಟಿ20 ಮಾದರಿಯಲ್ಲಿ ತನ್ನ ಬಲ ಪ್ರದರ್ಶಿಸಲು ಮುಂದಾಗಿದೆ. ಸೂರ್ಯಕುಮಾರ್ ಯಾದವ್ ಈ ಟಿ20 ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಶುಭ್ಮನ್ ಗಿಲ್ ಉಪನಾಯಕನಾಗಿ…
ಬೆಳಗಾವಿ: ನಾಳೆಯಿಂದ ಬೆಳಗಾವಿ ಚಳಿಗಾಲದ ಅಧಿವೇಶನ (Belagavi Winter Session) ಆರಂಭವಾಗಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಚಳಿಗಾಲದ ಅಧಿವೇಶನವು 10 ದಿನಗಳ ಕಾಲ ನಡೆಯಲಿದೆ. ಪ್ರತಿ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಆರಂಭವಾಗಿದ್ದು, ಇಲ್ಲಿಯವರೆಗೆ 13 ಬಾರಿ ಉಭಯ ಸದನಗಳ ಅಧಿವೇಶನ ನಡೆದಿದೆ. ಇಲ್ಲಿಯವರೆಗೆ ಈ ಅಧಿವೇಶನಕ್ಕಾಗಿ ಒಟ್ಟು 170 ಕೋಟಿ ರೂ. ವೆಚ್ಚ ಆಗಿದೆ. ಈ ಬಾರಿ 21 ಕೋಟಿ ರೂ. ಖರ್ಚಾಗುವ ಲೆಕ್ಕಾಚಾರವಿದೆ. ಹೀಗಾಗಿ ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.ಶಾಸಕರು, ಅಧಿಕಾರಿಗಳ ವಸತಿಗಾಗಿ 3 ಸಾವಿರ ಕೋಠಡಿಗಳು ಬುಕ್ಕಿಂಗ್ ಆಗಿವೆ. 6 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿವೆ. ಪೊಲೀಸರಿಗಾಗಿ ಜರ್ಮನ್ ಟೆಂಟ್ ವ್ಯವಸ್ಥೆ ಮಾಡಲಾಗಿದೆ. ಸಾಕಷ್ಟು ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುತ್ತಿದೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚಿಸುವುದಕ್ಕಾಗಿ ಬೆಳಗಾವಿ ಅಧಿವೇಶನ ನಡೆಸಲಾಗುತ್ತದೆ. ಆದರೆ, ಅಧಿವೇಶನ ಬೆಂಗಳೂರು ಅಧಿವೇಶನದಂತೆ ಚರ್ಚೆ, ಜಗಳಕ್ಕೆ ಸೀಮಿತವಾಗುತ್ತಿದೆಯೇ ಹೊರತು ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಜನ…
ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಕೆಲಸ ಮುಗಿಸಿ ಮನೆಗೆ ಹೋದ ನಂತರವೂ ಬಾಸ್ ಗಳ ಕಿರಿಕಿರಿ ತಪ್ಪಿದ್ದಲ್ಲ ಎಂಬ ಮಾತು ಕೇಳಿ ಬರುತ್ತಲೇ ಇವೆ. ಇಂತಹ ಘಟನೆಗಳಿಂದಾಗಿ ತೀವ್ರ ಒತ್ತಡ ಎದುರಿಸುತ್ತಿದ್ದೇವೆಂದು ಹಲವರು ಬಹಿರಂಗವಾಗಿಯೇ ಹೇಳಿಕೊಳ್ಳುತ್ತಿದ್ದರು. ಈಗ ಕೇಂದ್ರ ಸರ್ಕಾರ ಇಂತಹ ಒತ್ತಡಗಳಿಗೆ ಮುಕ್ತಿ ಹಾಡಲು ಮುಂದಾಗಿದೆ. ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಕೆಲವು ಮಹತ್ವದ ಮಸೂದೆಗಳನ್ನು ಮಂಡಿಸಲಾಗಿದೆ. ಈ ಪೈಕಿ “ರೈಟ್ ಟು ಡಿಸ್ಕನೆಕ್ಟ್ ಬಿಲ್ 2025” (ದೂರವಾಣಿ ಸಂಪರ್ಕ ಕಡಿತಗೊಳಿಸುವ ಹಕ್ಕು) ಮಂಡಿಸಲಾಗಿದೆ. ಈ ಮೂಲಕ ಖಾಸಗಿ ಉದ್ಯೋಗಿಗಳ ಹಕ್ಕುಗಳ ರಕ್ಷಣೆ ಮಾಡಲು ಸರ್ಕಾರ ನಿರ್ಧರಿಸಿದೆ. ಕೆಲಸದ ಸಮಯ ಮುಕ್ತಾಯವಾದ ನಂತರ ಹಾಗೂ ರಜಾ ದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ದೂರವಾಣಿ ಕರೆಗಳು ಮತ್ತು ಇಮೇಲ್ಗಳಿಂದ “ರೈಟ್ ಟು ಡಿಸ್ಕನೆಕ್ಟ್ ಬಿಲ್ 2025” ನ್ನು ಉದ್ಯೋಗಿಗೆ ನೀಡಲು ನೌಕರರ ಕಲ್ಯಾಣ ಪ್ರಾಧಿಕಾರ ರಚಿಸಲಾಗುತ್ತದೆ. ಈ ಬಿಲ್ ನಂತೆ, ಕೆಲಸದ ಸಮಯದ ನಂತರ ಕಚೇರಿಯ ಕರೆಗಳು ಮತ್ತು ಇಮೇಲ್ಗಳಿಗೆ ಪ್ರತಿಕ್ರಿಯೆ ನೀಡುವ ಅಗತ್ಯ ಇಲ್ಲ.…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (H.D Kumaraswamy) ಬಹಿರಂಗವಾಗಿ ಆದಿಚುಂಚನಗಿರಿ ಶ್ರೀಗಳ(Nirmala Nandanath swamiji)ಕ್ಷಮೆ ಕೋರಿದ್ದಾರೆ. ಇಂದು ನಡೆದ ವಿಸಿ ಫಾರ್ಮ್ ನ ಕೃಷಿ ಮೇಳದಲ್ಲಿ ಕ್ಷಮೆ ಯಾಚಿಸಿದ್ದಾರೆ. ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜದ ಗೌರವ ಉಳಿಸುವುದಕ್ಕಾಗಿ ಬೀದಿಗೆ ಬಂದವರು. ಅವರಿಗೆ ದೇವೇಗೌಡರು ಸಿಎಂ ಆಗಲಿ ಎಂಬ ಕನಸು ಇತ್ತು. ನನ್ನನ್ನು ಕಂಡರೆ ಅವರಿಗೆ ದೊಡ್ಡ ಪ್ರೀತಿ. ನನ್ನಿಂದ ಈಗ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಅಪಚಾರವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ. ಹಿಂದೆ ಕುಮಾರಸ್ವಾಮಿ, ನಾನು ಎರಡು ಬಾರಿ ಸಿಎಂ ಆಗಿ ಅಧಿಕಾರ ಕಳೆದುಕೊಂಡಾಗ ಯಾವುದೇ ಮಠಾಧೀಶರರ ನೆರವು ಕೇಳಿರಲಿಲ್ಲ. ಮಠಾಧೀಶರ ಕೆಲಸವೇ ಬೇರೆ ಎಂದು ಹೇಳಿದ್ದರು. ರಾಜ್ಯದಲ್ಲಿ ನಡೆಯುತ್ತಿರುವ ಜಾತೀಯ ರಾಜಕಾರಣದಿಂದ ರಾಜ್ಯಕ್ಕೆ ನಷ್ಟವಾಗುತ್ತದೆಯೇ ಹೊರತು ಯಾರಿಗೂ ಲಾಭವಾಗುವುದಿಲ್ಲ. ಇದು ಸಮಾಜಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂಬ ಹೇಳಿಕೆ ನೀಡಿದ್ದರು. ಈಗ ಇದೇ ವಿಷಯವಾಗಿ ಕ್ಷಮೆ ಯಾಚಿಸಿದ್ದಾರೆ. ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮಿಗಳು ಇಲ್ಲಿಗೆ ಬರಬಾರದು. ಅವರಿಗೆ…
ವಿಶಾಖಪಟ್ಟಣ: ಭಾರತೀಯ ಕ್ರಿಕೆಟ್ ತಂಡಕ್ಕೆ ಇದೊಂದು ಗೆಲುವು ಬರೋಬ್ಬರಿ ಎರಡು ವರ್ಷಗಳ ನಂತರ ಸಿಕ್ಕಿದ್ದು, ಈಗ ಅದೊಂದು ಕಳವಳ ದೂರಾಗಿದೆ. ಇದೇನಪ್ಪಾ! ಕ್ರಿಕೆಟ್ ತಂಡ ಸೋಲಿಗಿಂತ ಹೆಚ್ಚು ಗೆಲುವು ಸಾಧಿಸಿದೆ. ಉತ್ತಮ ಪ್ರದರ್ಶನ ತೋರಿಸುತ್ತಿದೆ. ಇದ್ಯಾವ ಗೆಲುವು ಅಂತೀರಾ? ಹೌದು! ಬರೋಬ್ಬರಿ 2 ವರ್ಷಗಳ ನಂತರ ಭಾರತ ತಂಡ ಟಾಸ್ ಗೆದ್ದಿದೆ. ಅದು ಬರೋಬ್ಬರಿ 20 ಪಂದ್ಯಗಳಲ್ಲಿ ಟಾಸ್ (Toss) ಸೋತ ನಂತರ ಈಗ 21ನೇ ಪಂದ್ಯದಲ್ಲಿ ಟಾಸ್ ಗೆದ್ದಿದೆ. ದಕ್ಷಿಣ ಆಫ್ರಿಕಾ (South Africa) ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಟಾಸ್ ಗೆಲ್ಲುವ ಮೂಲಕ ತನ್ನ ಕಳವಳವನ್ನು ದೂರ ಮಾಡಿಕೊಂಡಿದೆ. ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ (KL Rahul) ನಾಣ್ಯ ಚಿಮ್ಮಿಸಿ ಹೆಡ್ ಎಂದು ಕಾಲ್ ಮಾಡಿದರು. ಹೆಡ್ ಬಿದ್ದ ಕೂಡಲೇ ಕೆಎಲ್ ರಾಹುಲ್ ನಕ್ಕು ಬೌಲಿಂಗ್ ಮಾಡುವ ನಿರ್ಧಾರ ಕೈಗೊಂಡರು. ಭಾರತ ತಂಡವು ಈ ಹಿಂದೆ…
ಬೆಂಗಳೂರು : ಮನೆಯಲ್ಲಿ ಗ್ಯಾಸ್ ಗೀಸರ್(Gas Geyser) ಸೋರಿಕೆಯಿಂದಾಗಿ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವ ವಿವಾಹಿತೆ (Newlywed Death) ಭೂಮಿಕಾ(24) ಸಾವನ್ನಪ್ಪಿರುವ ದುರ್ದೈವಿ. ಈ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ ಎನ್ನಲಾಗಿದೆ. ಈ ಘಟನೆ ಕಳೆದ ನಾಲ್ಕೈದು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಭೂಮಿಕಾ ಸ್ನಾನಕ್ಕೆಂದು ತೆರಳಿದಾಗ ಗ್ಯಾಸ್ ಗೀಸರ್ ಲೀಕ್ ಆಗಿ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಾಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಯಾರಾದರೂ ಇದ್ದಿದ್ದರೆ ಭೂಮಿಕಾ ಪ್ರಾಣ ಉಳಿಯುತ್ತಿತ್ತು ಎಂದು ಕುಟುಂಬಸ್ಥರು ಭಾವಿಸಿದ್ದಾರೆ. ಭೂಮಿಕಾ ಮೂಲತಃ ಹಾಸನ ತಾಲೂಕಿನವರು ಎನ್ನಲಾಗಿದ್ದು, ಪತಿಯೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ಪತಿ ಕೆಲಸ ಮುಗಿಸಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಗ್ಯಾಸ್ ಗೀಜರ್ ಸೋರಿಕೆಯಾಗಿದ್ದ ವೇಳೆ ಸ್ನಾನದ ಗೃಹದ ಕಿಟಕಿ ಬಾಗಿಲು ಕೂಡ ಬಂದ್ ಆಗಿತ್ತು ಎನ್ನಲಾಗಿದೆ.…
ತಿರುವನಂತಪುರಂ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಹಲವಾರು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಇಡೀ ವಿಶ್ವವೇ ಈ ಭೇಟಿಯನ್ನು ಬೆರಗು ಕಣ್ಣಿನಿಂದ ನೋಡುತ್ತಿದ್ದರೆ, ವಿರೋಧಿ ರಾಷ್ಟ್ರಗಳಿಗೆ ಭಯ ಹುಟ್ಟಿದೆ. ಈ ಮಧ್ಯೆ ಕೇರಳ ಕಾಂಗ್ರೆಸ್, ಶಿಷ್ಟಾಚಾರದ ಸಭ್ಯತೆ ಮರೆಯಿತೇ? ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಪುಟಿನ್ ಆಗಮನದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕೇರಳ ಕಾಂಗ್ರೆಸ್, “ವ್ಲಾಡಿಮಿರ್ ಪುಟಿನ್, ನರೇಂದ್ರ ಮೋದಿ ಅವರ ಅನುಯಾಯಿಗಳ ಹೊಸ ಪಾವ್ ಪಾವ್” ಎಂದು ಲೇವಡಿ ಮಾಡಿದೆ. ಪುಟಿನ್ ಈಗ ಪ್ರಧಾನಿ ಮೋದಿ ಅಭಿಮಾನಿಗಳ ಹೊಸ ನಾಯಕರಾಗಿದ್ದಾರೆ ಎಂದು ಹಾಸ್ಯಾಸ್ಪದವಾಗಿ ಹೇಳಲಾಗಿದೆ. ಹೊಸ ಡ್ಯಾಡಿ ಅಲರ್ಟ್…. ಪುಟಿನ್ ಮೋದಿ ಭಕ್ತರ ಹೊಸ ಪಾವ್ಪಾವ್. ಡಿಸೆಂಬರ್ ಅಂತ್ಯದೊಳಗೆ ಮೋದಿ ಬೇರೆ ಡ್ಯಾಡಿಯನ್ನು ಅಪ್ಪಿಕೊಳ್ಳುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಪುಟಿನ್ ತಮ್ಮ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂಬ ಭರವಸೆ ಇದೆ” ಎಂದು ಕೇರಳ ಕಾಂಗ್ರೆಸ್ ಎಕ್ಸ್ ನಲ್ಲಿ ಬರೆದುಕೊಂಡಿದೆ. ಇದಕ್ಕೆ ದೇಶಾದ್ಯಂತ ತೀವ್ರ…
ಮೈಸೂರು: ಬ್ರೇಕ್ ಫಾಸ್ಟ್ ಮೀಟಿಂಗ್ ನಂತರ ಸಿಎಂ ಕುರ್ಚಿಯ ಗುದ್ದಾಟ ತಣ್ಣಗಾಗಿದೆ ಎಂದು ಭಾವಿಸಿದರೂ ಒಳಒಳಗೆ ಮಾತ್ರ ಅದು ಕುದಿಯುತ್ತಲೇ ಇದೆ. ಈಗ ಸಿಎಂ ಕುರ್ಚಿಯ ಕನಸಿನ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ಸಿಎಂ ಆಗಬೇಕೆಂಬ ಆಸೆ ಇದೆ. ಆದರೆ, ಸಮಯ ಹಾಗೂ ಸಂದರ್ಭ ಎಲ್ಲವನ್ನೂ ನಿರ್ಧರಿಸುತ್ತದೆ. ಈ ವಿಷಯದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ. ಹೈಕಮಾಂಡ್ ತೀರ್ಮಾನಿಸಿದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ, ಈ ವಿಷಯದಲ್ಲಿ ನನ್ನನ್ನು ಎಳೆ ತರಬೇಡಿ ಎಂದಿದ್ದಾರೆ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈಗಾಗಲೇ ಸಿಎಂ ಇದ್ದಾರೆ. ಸಿಎಂ, ಡಿಸಿಎಂ ಎಲ್ಲರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದಾರೆ. ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇರುತ್ತದೆ. ಆದರೆ, ಯಾರು ಆಗಬೇಕು ಎನ್ನುವುದನ್ನು ಹೈಕಮಾಂಡ್ ಮಾತ್ರ ನಿರ್ಧರಿಸುತ್ತದೆ. ಈ ವಿಷಯದಲ್ಲಿ ಬಿಜೆಪಿ ಸುಮ್ಮನೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬಿಜೆಪಿ ನಾಯಕರು ಕೇವಲ ಭಾಷಣ ವೀರರು. ಅವರಿಗೆ ಜನರ…