Author: chandrakant

ಕನ್ನಡ ಚಿತ್ರರಂಗದ ಜನಪ್ರಿಯ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್‍, ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಅಮೇರಿಕಾದ ಫ್ಲೋರಿಡಾದ ಯೋಗ – ಸಂಸ್ಕೃತಂ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್‍ ನೀಡಿ ಗೌರವಿಸಿದೆ. ಶ್ರೀ ಸುಭುದೇಂದ್ರ ತೀರ್ಥರಿಂದ ಮಂತ್ರಾಲಯದಲ್ಲಿ ಡಾಕ್ಟರೇಟ್‍ ಪ್ರದಾನ ಸೋಮವಾರ, ಮಂತ್ರಾಲಯದಲ್ಲಿ ಸುಧೀಂದ್ರ ವೆಂಕಟೇಶ್‍ ಅವರಿಗೆ ಗೌರವ ಡಾಕ್ಟರೇಟ್‍ ಪ್ರದಾನವಾಗಿದ್ದು, ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥರು ಗೌರವ ಡಾಕ್ಟರೇಟ್‍ ನೀಡಿ ಗೌರವಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗಕ್ಕೆ ಸುಧೀಂದ್ರ ವೆಂಟಕೇಶ್‍ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಗೌರವ ಡಾಕ್ಟರೇಟ್‍ ನೀಡಲಾಗಿದೆ. ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯು ಕಳೆದ 50 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ಕನ್ನಡ ಚಿತ್ರರಂಗದಲ್ಲಿ ಐದು ದಶಕಗಳ ಇತಿಹಾಸವಿರುವ ಮತ್ತು ಇನ್ನೂ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಸಂಸ್ಥೆಗಳಲ್ಲಿ ಒಂದಾಗಿ ಶ್ರೀ…

Read More

ಹಾಸನ ಜಿಲ್ಲೆಯ ಶ್ರವಣಬೆಳಗೊಳವು ಧಾರ್ಮಿಕ ಮತ್ತು ಐತಿಹಾಸಿಕ ಮಹತ್ವದಿಂದ ಪ್ರಸಿದ್ಧಿ ಪಡೆದ ಸ್ಥಳ. ಇದೇ ಪಟ್ಟಣದಿಂದ ಅಂತರರಾಷ್ಟ್ರೀಯ ಫ್ಯಾಷನ್ ರನ್‌ವೇಗಳವರೆಗೆ ತಲುಪಿರುವ ಮಾಡೆಲ್ ರಚಿಕಾ ಸುರೇಶ್ ಅವರ ಬದುಕು ಈಗ ಹಲವರಿಗೆ ಕುತೂಹಲ ಕೆರಳಿಸಿದೆ. ಕೃಷಿಕ ಕುಟುಂಬದಲ್ಲಿ 4 ಅಕ್ಟೋಬರ್ 2003 ಜನಿಸಿ ಬೆಳೆದ ಅವರು, ಪರಿಶ್ರಮ ಮತ್ತು ಶಿಸ್ತಿನ ಮೌಲ್ಯಗಳನ್ನು ಬಾಲ್ಯದಲ್ಲೇ ಕಲಿತವರು. ರಚಿಕಾ ಅವರ ತಂದೆ ಸುರೇಶ್ ಗೌಡ ರೈತ. ಗ್ರಾಮೀಣ ಪರಿಸರ, ಬೆಳೆಕಾಳಜಿ, ಕುಟುಂಬದ ಜವಾಬ್ದಾರಿಗಳ ನಡುವೆ ಬೆಳೆದ ರಚಿಕಾ ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರಿಗೆ ಬಂದರು. ಶ್ರವಣಬೆಳಗೊಳದ ಬಹುಬಲಿ ಕಾಲೇಜಿನಲ್ಲಿ ಪ್ರಾಥಮಿಕ ಮತ್ತು ಪದವಿ ಪೂರ್ವ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಅವರು, ನಂತರ ಬೆಂಗಳೂರು ನಗರ ವಿಶ್ವವಿದ್ಯಾಲಯದಿಂದ ಬಿಕಾಂ ಪದವಿ ಹಾಗೂ ಎಂ.ಎಸ್. ರಾಮಯ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ ಪಡೆದರು. ಮಾಡೆಲಿಂಗ್ ಕ್ಷೇತ್ರಕ್ಕೆ ಅವರ ಪ್ರವೇಶ ಪೂರ್ವಯೋಜಿತವಾಗಿರಲಿಲ್ಲ. ಕಾಲೇಜು ಕಾರ್ಯಕ್ರಮಗಳು, ಫ್ಯಾಷನ್ ಶೋಗಳ ಆಹ್ವಾನಗಳು ಮತ್ತು ಆಯ್ಕೆ ಪ್ರಕ್ರಿಯೆಗಳ ಮೂಲಕ ನಿಧಾನವಾಗಿ ಅವಕಾಶಗಳು ಒದಗಿದವು. ಆರಂಭದಲ್ಲಿ ಉದ್ಯಮದ…

Read More

ಹುಬ್ಬಳ್ಳಿ, ಜನವರಿ 24: ರಾಜ್ಯದ ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿಗಳು ಇಡೀ ವಿಶ್ವದಲ್ಲೇ ಮಾದರಿಯಾಗಿವೆ. ಈ ಗ್ಯಾರಂಟಿಗಳಿಗೆ ವರ್ಷಕ್ಕೆ ಅರವತ್ತು ಸಾವಿರ ಕೋಟಿ ವ್ಯಯಿಸಲಾಗುತ್ತಿದೆ. ಐದು ವರ್ಷಕ್ಕೆ ಮೂರು ಲಕ್ಷ ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ 46,000 ಮನೆಗಳ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಸಾಕಷ್ಟು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದೆ. ಆದರೆ ಅವರು ಯಾರೂ ನಮ್ಮ ಸರ್ಕಾರ ನೀಡಿರುವ ಗ್ಯಾರಂಟಿಗಳನ್ನು ಜಾರಿ ಮಾಡಿಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಇಂತಹ ಮಹತ್ವದ ಅಭೂತಪೂರ್ವ ಗ್ಯಾರಂಟಿಗಳನ್ನು ಜಾರಿ ಮಾಡಿ ಮಾದರಿಯಾಗಿದೆ ಎಂದು ಬಣ್ಣಿಸಿದರು. ಶಕ್ತಿ ಯೋಜನೆಯಲ್ಲಿ 500 ಕೋಟಿ…

Read More

ಬೆಂಗಳೂರು: ಭಾರತೀಯ ಜ್ಞಾನ ಪರಂಪರೆಯನ್ನು ಆಧುನಿಕ ವಿಜ್ಞಾನದೊಂದಿಗೆ ಬೆಸೆಯುವ ವಿಶಿಷ್ಟ ಪ್ರಯತ್ನವೊಂದಕ್ಕೆ ಉದ್ಯಾನನಗರಿ ಬೆಂಗಳೂರು ಸಾಕ್ಷಿಯಾಗುತ್ತಿದೆ. ಪರಮ್ ಫೌಂಡೇಶನ್ ಮತ್ತು ವೇದಾಂತ ಭಾರತಿ ಜಂಟಿಯಾಗಿ ವಿದ್ಯಾರ್ಥಿಗಳಿಗಾಗಿ ‘ ವೇದಾಂತ ಮೇಕಥಾನ್’ ಎಂಬ ಎರಡು ತಿಂಗಳ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ. ವೇದಾಂತ ಮೇಕಥಾನ್: ಪ್ರಶ್ನೆಗಳು ಅನುಭವಗಳಾಗಿ ಬದಲಾಗುವ ವಿಶಿಷ್ಟ ವೇದಿಕೆ ಪರಮ್ ಫೌಂಡೇಶನ್ ಮತ್ತು ವೇದಾಂತ ಭಾರತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ‘ವೇದಾಂತ ಮೇಕಥಾನ್’ , ಭಾರತೀಯ ಜ್ಞಾನ ಪರಂಪರೆ ಮತ್ತು ಆಧುನಿಕ ವಿಜ್ಞಾನವನ್ನು ಬೆಸೆಯುವ ಒಂದು ಅಪೂರ್ವ ಪ್ರಯೋಗವಾಗಿದೆ. ಎರಡು ತಿಂಗಳ ಕಾಲ ನಡೆಯುವ ಈ ನವೀನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವೇದಾಂತದ ‘ಮಾಯೆ’, ‘ಚೈತನ್ಯ’ದಂತಹ ದಾರ್ಶನಿಕ ವಿಚಾರಗಳನ್ನು ದೃಷ್ಟಿ ಭ್ರಮೆ ಅಥವಾ ನರವಿಜ್ಞಾನದಂತಹ ಆಧುನಿಕ ತಂತ್ರಜ್ಞಾನದೊಂದಿಗೆ ಜೋಡಿಸಿ, ಸಂವಾದಾತ್ಮಕ ಪ್ರದರ್ಶಿಕೆಗಳನ್ನು ಸಿದ್ಧಪಡಿಸಲಿದ್ದಾರೆ. ತಜ್ಞರ ಮಾರ್ಗದರ್ಶನದಲ್ಲಿ ಮೂಡಿಬರುವ ಈ ಸೃಜನಶೀಲ ಮಾದರಿಗಳು ಅಂತಿಮವಾಗಿ ಜನವರಿ 29 ರಿಂದ ಫೆಬ್ರುವರಿ 1ರ ವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿರುವ ‘ದಕ್ಷಿಣಾಸ್ಯ ದರ್ಶಿನಿ’…

Read More

ಬೆಂಗಳೂರು, ಡಿ.23 : ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ದಾಖಲಿಸಿದ್ದ ಎಫ್‌ಐಆರ್‌ನಲ್ಲಿ ಹೆಸರಿಸಲಾದ ಆರೋಪಿ ಹಾಗೂ ಮಾಜಿ ಸಚಿವ, ಬಿಜೆಪಿ ಶಾಸಕ ಭೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. ಇಂದು (ಡಿ.23) ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗಜಾನನ ಭಟ್‌ ಅವರಿದ್ದ ನ್ಯಾಯಪೀಠ ಆದೇಶ ಹೊರಡಿಸಿದ್ದು, ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌ ನೀಡಿದೆ. ಕಳೆದ ಜುಲೈ ತಿಂಗಳಿನಲ್ಲಿ ಭಾರತಿ ನಗರದಲ್ಲಿ ಬಿಕ್ಲು ಶಿವನನ್ನು ಕೊಚ್ಚಿ ಕೊಲೆ ಮಾಡಲಾಗಿತ್ತು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದರು. ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ :ಸದ್ಯ ಶಾಸಕ ಭೈರತಿ ಬಸವರಾಜು ತಲೆ ಮರೆಸಿಕೊಂಡಿದ್ದು, ಸಿಐಡಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಹಿಂದೆ ಪೊಲೀಸರ ವಿಚಾರಣೆ ವೇಳೆ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳಿಗೂ ನನಗೂ ಸಂಬಂಧವಿಲ್ಲ ಎಂದು ಭೈರತಿ ಸುಳ್ಳು ಹೇಳಿದ್ದರು ಅಂತ ಹೇಳಲಾಗ್ತಿತ್ತು. ಆದ್ರೆ, ಕುಂಭಮೇಳ ವೇಳೆ…

Read More

ಕಿಚ್ಚು ಹಚ್ಚಿದ ಕಿಚ್ಚನ ಯುದ್ಧದ ಮಾತು, ಸ್ಟಾರ್‌ವಾರ್‌ಗೆ ಆಹ್ವಾನ ಕೊಟ್ಟ ಮಾರ್ಕ್‌ ಮೂವಿ!, ಸುದೀಪ್‌ ಮಾತಿಗೆ ಕೌಂಟರ್‌ ಕೊಟ್ಟ ದಾಸನ ಪತ್ನಿ ವಿಜಯಲಕ್ಷ್ಮೀ! ಕಿಚ್ಚನ ವಿರುದ್ಧ ಮಾತಿನ ಯುದ್ಧಕ್ಕೆ ನಿಂತ ಡಿಬಾಸ್‌ ಫ್ಯಾನ್ಸ್‌, ಸೋಷಿಯಲ್‌ ಮೀಡಿಯಾದಲ್ಲಿ ಶುರುವಾಯ್ತು ಬಿಗ್‌ವಾರ್‌, ಅಷ್ಟಕ್ಕೂ ದಿಢೀರ್‌ ಕಿಚ್ಚ ಕೆರಳಿದ್ದು ಯಾಕೆ? ಡೆವಿಲ್‌ VS ಮಾರ್ಕ್‌ ಜಗಳ ಶುರು ಆಗಿದ್ದು ಹೇಗೆ? ಅನ್ನೋದನ್ನ ಹೇಳ್ತೀವಿ ಅದಕ್ಕೂ ಮೊದಲು ಬಾಸ್‌ ಟಿವಿ ಕನ್ನಡ ಚಾನೆಲ್‌ನ್ನು ಸಬ್‌ಸ್ಕ್ರೈಬ್‌ ಮಾಡಿ.. ಬಾದ್‌ಷಾ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಮಾರ್ಕ್ ಡಿಸೆಂಬರ್ 25 ರಂದು ಗ್ರ್ಯಾಂಡ್ ಆಗಿ ರಿಲೀಸ್ ಆಗಲಿದೆ. ಹೀಗಾಗಿ ಹುಬ್ಬಳ್ಳಿಯಲ್ಲಿ ಈ ಚಿತ್ರದ ಪ್ರೀ ರಿಲೀಸ್ ಈವೆಂಟ್ ಏರ್ಪಡಿಸಲಾಗಿತ್ತು. ವೇದಿಕೆಯ ಮೇಲೆ ಮಾತನಾಡುವಾಗ ಸುದೀಪ್, ತಮ್ಮ ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ರು. ನಾವು ಯುದ್ಧಕ್ಕೆ ಸಿದ್ಧ; ಮಾತಿಗೆ ಬದ್ಧ ಅಂತ ಹೇಳಿದ್ದರು. ತಡೆಯೋಕೆ ಸಾಧ್ಯವಾಗುವಷ್ಟು ತಡೆಯಿರಿ. ಮಾತನಾಡೋ ಸಮಯದಲ್ಲಿ ಮಾತನಾಡಿ ಅಂತ ಹೇಳಿದ್ದರು. ಡಿಸೆಂಬರ್-25 ರಂದು ಥಿಯೇಟರ್‌ ಅಲ್ಲ ನೀವು…

Read More

ಬೆಂಗಳೂರು, ಡಿ.22: ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಮೂಹಿಕ ಧ್ಯಾನ ಜರುಗಿದ್ದು, ಗುರುದೇವ್ ಶ್ರೀ ಶ್ರೀ ರವಿಶಂಕರರ ನೇತೃತ್ವದಲ್ಲಿ 150 ದೇಶಗಳಿಂದ 1.21 ಕೋಟಿಗೂ ಹೆಚ್ಚಿನ ಜನರ ಸಹಭಾಗಿತ್ವದಲ್ಲಿ ಜಾಗತಿಕ ಕಲ್ಯಾಣಕ್ಕೆ ಹೊಸ ಆಯಾಮ ನೀಡುವ ಮಹತ್ವದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೆಚ್ಚುತ್ತಿರುವ ಆತಂಕ, ಒತ್ತಡ, ಸಂಘರ್ಷ ಮತ್ತು ಮಾನಸಿಕ ಆರೋಗ್ಯ ಸವಾಲುಗಳ ನಡುವೆಯೇ ಮಾನವಕುಲ ಹುಡುಕುತ್ತಿರುವ ಶಾಂತಿ ಮತ್ತು ಸಹನಶೀಲತೆಯ ಮಾರ್ಗ ತಿಳಿಸಲು ವಿಶ್ವ ಧ್ಯಾನ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಇದಾಗಿತ್ತು. ಜಗತ್ತಿನಲ್ಲಿ ಮಾನಸಿಕ ನೆಮ್ಮದಿ ಹಾಗೂ ಸಾಮಾಜಿಕ ಸಾಮರಸ್ಯವನ್ನು ನೆಲೆಗೊಳಿಸುವ ಉದ್ದೇಶದಿಂದ, 2024ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್ 21ನ್ನು ‘ವಿಶ್ವ ಧ್ಯಾನ ದಿನ’ವೆಂದು ಅಧಿಕೃತವಾಗಿ ಅಂಗೀಕರಿಸಿತು. ಪ್ರಸಕ್ತ ಸಾಲಿನ ಕಾರ್ಯಕ್ರಮವು ನ್ಯೂಯಾರ್ಕ್ ನಗರದ ವಿಶ್ವಸಂಸ್ಥೆಯ ಟ್ರಸ್ಟೀಶಿಪ್ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಿತು. ಗುರುದೇವ್ ಅವರ ನೇತೃತ್ವದಲ್ಲಿ ನಡೆದ ಧ್ಯಾನದ ಕಾರ್ಯಕ್ರಮದಲ್ಲಿ ರಾಜತಾಂತ್ರಿಕರು ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಈ ಧ್ಯಾನದಲ್ಲಿ ಭಾರತದ ಗ್ರಾಮೀಣ-ನಗರ ಪ್ರದೇಶಗಳು ಸೇರಿದಂತೆ, ಆಫ್ರಿಕಾ, ಯುರೋಪ್, ಏಷ್ಯಾ,…

Read More

ಬಿಗ್‌ಬಾಸ್‌.. ಕರುನಾಡಿನ ಅತಿ ದೊಡ್ಡ ರಿಯಾಲಿಟ್‌ ಶೋ, ಇನ್ನೇನು ಕ್ಲೈಮ್ಯಾಕ್ಸ್‌ ಹತ್ತಿರ ಬರುತ್ತಿರುವ ಗೇಮ್‌ನಲ್ಲಿ ದಿನಕ್ಕೊಂದು ಟ್ವಿಸ್ಟ್‌ ಸ್ಪರ್ಧಿಗಳು, ಅಭಿಮಾನಿಗಳು ಫುಲ್‌ ಶಾಕ್‌ ಆಗಿದ್ದಾರೆ. ಮೊದಲೇ ಹೇಳಿದಂತೆ ಬಿಗ್‌ಬಾಸ್‌ ಥೀಮ್ ಎಕ್ಸ್‌ಪೆಕ್ಟ್‌ ದಿ ಅನ್‌ಎಕ್ಸ್‌ಪೆಕ್ಟೆಡ್.. ಅದಕ್ಕೆ ತಕ್ಕಂತೆ ಇದೀಗ ಬಿಗ್‌ ಬ್ರೇಕಿಂಗ್‌ ನ್ಯೂಸ್‌ ಹೊರಬಂದಿದ್ದು, ರಜತ್ ಹಾಗೂ ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಯಿಂದ ಔಟ್‌ ಆಗಿದ್ದಾರೆ. ಅಸಲಿ ವಿಷ್ಯ ಏನಪ್ಪಾ ಅಂದ್ರೆ, ಇವರಿಬ್ಬರೂ ವೈಲ್ಡ್ ಕಾರ್ಡ್ ಸ್ಪರ್ಧಿಗಳಲ್ಲ. ಅತಿಥಿಗಳಷ್ಟೇ! ಏನ್‌ ಬಿಗ್‌ ಟ್ವಿಸ್ಟ್‌ನಿಂದ ಎಲ್ಲರೂ ಫುಲ್‌ ಸೈಕ್‌ ಆಗಿದ್ದಾರೆ. ಬಿಗ್‌ಬಾಸ್‌ ಅಡ್ಡದಲ್ಲಿ ಕಳೆದ ವಾರ ಎಲಿಮಿನೇಷನ್ ನಡೆದಿಲ್ಲ. ಎಲಿಮಿನೇಷನ್ ಹೆಸರಲ್ಲಿ ರಕ್ಷಿತಾ ಮತ್ತು ಧ್ರುವಂತ್ ಅವರನ್ನು ಹೊರಗೆ ಕಳಿಸಿದ್ದ ಬಿಗ್​​ಬಾಸ್ ಅವರಿಬ್ಬರನ್ನೂ ಸೀಕ್ರೆಟ್ ರೂಂನಲ್ಲಿ ಇರಿಸಿ, ಅವರನ್ನೂ ಸಹ ಟಾಸ್ಕ್‌ನ ಒಂದು ಭಾಗವಾಗಿಸಿದ್ದರು. ವೀಕ್‌ ಎಂಡ್‌ನಲ್ಲಿ ಎಪಿಸೋಡ್‌ನಲ್ಲಿ ರಕ್ಷಿತಾ ಮತ್ತು ಧ್ರುವಂತ್ ಅವರನ್ನು ಮತ್ತೆ ಮರಳಿ ಮನೆಗೆ ಕರೆಸಿಕೊಂಡ ಬಿಗ್‌ಬಾಸ್‌ ಇದೀಗ ಈ ವಾರವೂ ಯಾವುದೇ ಎಲಿಮಿನೇಷನ್ ಮಾಡಿಲ್ಲ. ಬದಲಿಗೆ…

Read More

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಅಧೋಗತಿಯಾಗಿದೆ.. ವಾಯುಮಾಲಿನ್ಯವಂತೂ ಈ ಋತುವಿನಲ್ಲೇ ಅತ್ಯಂತ ಕೆಟ್ಟ ಸ್ಥಿತಿಗೆ ತಲುಪಿದೆ.. ತೀವ್ರ ಮಟ್ಟದಿಂದ ʻತೀವ್ರ ಪ್ಲಸ್’ ಮಟ್ಟಕ್ಕೆ ಮಾಲಿನ್ಯ ತಲುಪಿದ್ದು ವೃದ್ಧರು, ಮಕ್ಕಳು, ಉಸಿರಾಟದ ತೊಂದರೆ ಇರುವವರು ಪರದಾಡುವಂತಾಗಿದೆ.. ಪರಿಸ್ಥಿತಿ ಕೈಮೀರಿ ಹೋಗುತ್ತಿರುವ ಕಾರಣ ದೆಹಲಿ ಸರ್ಕಾರ ಮಹತ್ವದ ನಿರ್ಧಾರ ತೆಗದುಕೊಂಡಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ಆನ್‌ಲೈನ್ ತರಗತಿಗಳನ್ನು ನಡೆಸುವಂತೆ ನಿರ್ದೇಶಿಸಿದೆ. ಇತ್ತ 9 ಮತ್ತು 11 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹೈಬ್ರಿಡ್ ಮೋಡ್‌ನಲ್ಲಿ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ.. ಇನ್ನೂ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಿಗೆ ಶೇ.50ರಷ್ಟು ನೌಕರರಿಗೆ ವರ್ಕ್‌ ಫ್ರಮ್‌ ಹೋಮ್‌ ಕಡ್ಡಾಯಗೊಳಿಸಿದೆ.. ಜೊತೆಗೆ ನಿರ್ಮಾಣ ಕಾಮಗಾರಿಗಳನ್ನು ನಿಷೇಧಿಸಿದ್ದು, ಕಾರ್ಮಿಕರಿಗೆ 10,000 ರೂ. ಪರಿಹಾರವನ್ನು ಘೋಷಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ BS-6ಗಿಂತ ಕಡಿಮೆ ವಾಹನಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ಬ್ಯಾನ್‌ ಮಾಡಲಾಗಿದೆ.. ಪಿಯುಸಿಸಿ ಇಲ್ಲದ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಸಿಗದಿರಲು…

Read More

“ನನ್ನ ಬಳಿ ಇರುವ ದುಬಾರಿ ವಾಚ್ ಗಳ ಬಗ್ಗೆ ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ಆ ವಾಚ್ ಖರೀದಿ ಬಗ್ಗೆ ನನಗೆ ಗೊತ್ತು, ಬಿಜೆಪಿಯವರಿಗೇನು ಗೊತ್ತು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ನಿಮ್ಮ ಅಫಿಡವಿಟ್‌ನಲ್ಲಿ ದುಬಾರಿ ವಾಚ್ ಬಗ್ಗೆ ತಿಳಿಸಿಲ್ಲ ಎಂಬ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ನಾರಾಯಣಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರಿಗೇನು ಗೊತ್ತು? ನನ್ನ ಅಫಿಡವಿಟ್ ನನಗೆ ಗೊತ್ತು, ಕಾಸು ಕೊಟ್ಟಿರುವುದು ನಾನು, ಕ್ರೆಡಿಟ್ ಕಾರ್ಡ್ ಬಳಸಿರೋದು ನಾನು. ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ನನ್ನ ಬಳಿ ರೋಲೆಕ್ಸ್ ವಾಚ್ ಇರುವುದನ್ನೂ ಹೇಳಿದ್ದೇನೆ. ನಾರಾಯಣಸ್ವಾಮಿಯಿಂದ ಕಲಿಯುವುದೇನಿಲ್ಲ” ಎಂದು ಹೇಳಿದರು. ಇದು ಕದ್ದಿರುವ ವಾಚಾ ಎಂದು ನಾರಾಯಣಸ್ವಾಮಿ ಅವರು ಕೇಳಿರುವ ಬಗ್ಗೆ ಹೇಳಿದಾಗ, “ಹೌದು, ನಾನು ಅವರ ಮನೆಯಿಂದಲೇ ಕದ್ದಿದ್ದೇನೆ” ಎಂದು ಛೇಡಿಸಿದರು.

Read More