Author: chandrakant

“ನನ್ನ ಬಳಿ ಇರುವ ದುಬಾರಿ ವಾಚ್ ಗಳ ಬಗ್ಗೆ ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ಆ ವಾಚ್ ಖರೀದಿ ಬಗ್ಗೆ ನನಗೆ ಗೊತ್ತು, ಬಿಜೆಪಿಯವರಿಗೇನು ಗೊತ್ತು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ನಿಮ್ಮ ಅಫಿಡವಿಟ್‌ನಲ್ಲಿ ದುಬಾರಿ ವಾಚ್ ಬಗ್ಗೆ ತಿಳಿಸಿಲ್ಲ ಎಂಬ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ನಾರಾಯಣಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರಿಗೇನು ಗೊತ್ತು? ನನ್ನ ಅಫಿಡವಿಟ್ ನನಗೆ ಗೊತ್ತು, ಕಾಸು ಕೊಟ್ಟಿರುವುದು ನಾನು, ಕ್ರೆಡಿಟ್ ಕಾರ್ಡ್ ಬಳಸಿರೋದು ನಾನು. ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ನನ್ನ ಬಳಿ ರೋಲೆಕ್ಸ್ ವಾಚ್ ಇರುವುದನ್ನೂ ಹೇಳಿದ್ದೇನೆ. ನಾರಾಯಣಸ್ವಾಮಿಯಿಂದ ಕಲಿಯುವುದೇನಿಲ್ಲ” ಎಂದು ಹೇಳಿದರು. ಇದು ಕದ್ದಿರುವ ವಾಚಾ ಎಂದು ನಾರಾಯಣಸ್ವಾಮಿ ಅವರು ಕೇಳಿರುವ ಬಗ್ಗೆ ಹೇಳಿದಾಗ, “ಹೌದು, ನಾನು ಅವರ ಮನೆಯಿಂದಲೇ ಕದ್ದಿದ್ದೇನೆ” ಎಂದು ಛೇಡಿಸಿದರು.

Read More

ಮಹಿಳಾ ನೌಕರರ ಸಮಾವೇಶದ ಬಗ್ಗೆ ಕೇಳಿದಾಗ, “ಮಹಿಳೆಯರಿಗೆ ಉತ್ತೇಜನ ನೀಡಲು ನಮ್ಮ ಸರ್ಕಾರ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ನಾನು ನೀರಾವರಿ ಸಚಿವನಾಗಿ ಅಧಿಕಾರ ಸ್ವೀಕಾರ ಮಾಡಿದಾಗ, ಎತ್ತಿನಹೊಳೆ ಯೋಜನೆ ಕಾಮಗಾರಿ ಪರಿಶೀಲನೆಗೆ ಹೋಗಿದ್ದೆ. ಆಗ ಅಲ್ಲಿ ಒಬ್ಬ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದರೂ ಯೋಜನೆಗೆ ಅಡ್ಡಿಪಡಿಸುತ್ತಿದ್ದ. ಆಗ ಅಲ್ಲಿದ್ದ ಮೂವರು ಮಹಿಳಾ ಐಎಎಸ್ ಅಧಿಕಾರಿಗಳಿಗೆ ನಾನು ಕೆಲವು ಮಾರ್ಗದರ್ಶನ ನೀಡಿದೆ. ಅವರು ಕೇವಲ ಒಂದೇ ತಿಂಗಳಲ್ಲಿ ಈ ಸಮಸ್ಯೆ ಬಗೆಹರಿಸಿದರು. ಹೀಗೆ ಮಹಿಳೆಯರು ಎಲ್ಲಾ ವಿಚಾರದಲ್ಲೂ ಸಮರ್ಥರಿದ್ದಾರೆ. ಅವರು ಪುರುಷರಿಗಿಂತ ಹೆಚ್ಚು ಶಿಸ್ತುಬದ್ಧವಾಗಿ ಕೆಲಸ ಮಾಡುತ್ತಾರೆ. ಹೀಗಾಗಿ ನಾವು ಅವರಿಗೆ ಪ್ರೋತ್ಸಾಹ ನೀಡುತ್ತಿದ್ದೇವೆ. ಇಂದು ಮಹಿಳಾ ನೌಕರರ ಸಂಘದವರ ಕಾರ್ಯಕ್ರಮಕ್ಕೆ ಬೆಂಬಲ ನೀಡಿದ್ದೇವೆ. ಎಲ್ಲರೂ ಸಮಾನರು, ಪುರುಷ ಹಾಗೂ ಮಹಿಳೆಯರು ಎಂದು ತಾರತಮ್ಯ ಮಾಡಬಾರದು” ಎಂದು ತಿಳಿಸಿದರು.

Read More

ಬೆಂಗಳೂರು, ಡಿಸೆಂಬರ್ 05, 2025: ಸದಾ ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸಿ ನಂ.1 ಸ್ಥಾನ ಪಡೆದಿರುವ ಜೀ ಕನ್ನಡ 2025 ನ್ನು ವರ್ಷದ ಕೊನೆಗೆ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡುತ್ತಿದೆ. ವಿಭಿನ್ನ ದಿಕ್ಕಿನಲ್ಲಿ ಸಾಗುವ ಇಬ್ಬರ ಪ್ರಯಾಣ ‘ಆದಿ ಲಕ್ಷ್ಮಿ ಪುರಾಣ’ ಇದೇ ಡಿಸೆಂಬರ್ 8 ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ. ಕಿರುತೆರೆಯಲ್ಲಿ ಸದ್ದು ಮಾಡಲು ಸಿದ್ದವಾಗಿರುವ ‘ಆದಿಲಕ್ಷ್ಮೀ ಪುರಾಣ’ ಸಂಪ್ರದಾಯ ಮತ್ತು ಆಧುನಿಕತೆಯ ಮಧ್ಯೆ ನಿರ್ಮಾಣವಾದ ಕಥೆಯಾಗಿದೆ. ಹಳ್ಳಿ ಹುಡುಗಿ ಲಕ್ಷಿ, ಸಿಟಿ ಹುಡುಗ ಆದಿ ನಡುವಿನ ಕಥೆಯನ್ನು ಪ್ರೇಕ್ಷಕರ ಮುಂದಿಡಲಿದೆ. ಮೊದಲ ಭೇಟಿಯಲ್ಲೇ ಆದಿಯಿಂದ ತಿರಸ್ಕರಿಸಲ್ಪಟ್ಟ ಲಕ್ಷ್ಮಿ ಪುನಃ ಆತನ ಜಗತ್ತಿಗೆ ಮರಳಿ ಬರುತ್ತಾಳೆ. ಆದಿಯ ಪ್ರೀತಿ ಪಡೆಯಲು ಪರದಾಡುವ ಲಕ್ಷ್ಮಿ ಆತನ ತಾತ ಧರ್ಮರಾಜ್ ಅವರು ನೀಡುವ ಕಠಿಣ ಸವಾಲುಗಳನ್ನು ಎದುರಿಸುತ್ತಾಳೆ. ಮನೆ, ಕಾಲೇಜು ಇವೆರಡರನ್ನು ಲಕ್ಷ್ಮಿ ಹೇಗೆ ಸರಿದೂಗಿಸಿಕೊಂಡು ಹೋಗುತ್ತಾಳೆ ಎಂಬುದು ಈ ಕಥೆಯ ಮುಖ್ಯ ಸಾರಾಂಶ. ಈ ಧಾರಾವಾಹಿಯ ಕಥೆಯನ್ನು…

Read More

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ.. 2025ರ ಮೋಸ್ಟ್‌ ಎಕ್ಸೈಟೆಡ್‌ ಅಂಡ್‌ ಅವೈಟೆಡ್ ಫಿಲಂ.. ದಿ ಡೆವಿಲ್‌ ರಿಲೀಸ್‌ಗೆ ಸಜ್ಜಾಗಿ ನಿಂತಿದೆ. ಇದೇ ಡಿಸೆಂಬರ್‌ 11, ಗುರುವಾರದಂದು ರಾಜ್ಯಾದ್ಯಂತ ಡೆವಿಲ್‌ ದರ್ಶನವಾಗಲಿದೆ.. 2023ರ ಕಾಟೇರ ಸಿನಿಮಾ ಬಳಿಕ ಬರೋಬ್ಬರಿ 2 ವರ್ಷಗಳ ಬಳಿಕ ಡಿ ಬಾಸ್‌ ತೆರೆ ಮೇಲೆ ರಾರಾಜಿಸಲಿದ್ದಾರೆ.. ಆದ್ರೆ ವಿಷಯ ಏನಂದ್ರೆ ಇದೇ ಡೆವಿಲ್‌ ಸಿನಿಮಾದ ಟ್ರೈಲರ್‌ ರಿಲೀಸ್‌ ಆಗಿದ್ದು, ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿದೆ. ಸಿನಿಮಾ ಮೇಲಿದ್ದ ನಿರೀಕ್ಷೆ ದುಪ್ಪಟ್ಟಾಗಿಸಿದೆ.. ಇದ್ರ ಜೊತೆಗೆ ದರ್ಶನ್‌ನ ಇನ್ನೊಂದು ಮುಖವನ್ನ ಅನಾವರಣಗೊಳಿಸಿದೆ. ಡೆವಿಲ್‌ ಸಿನಿಮಾದ ಟ್ರೈಲರ್‌ ರಿಲೀಸ್‌ ಆದ ಕೆಲವೇ ಗಂಟೆಗಳಲ್ಲಿ ಮಿಲಿಯನ್‌ಗಟ್ಟಲೇ ವ್ಯೂವ್ಸ್‌ ಪಡೆದು ಮುನ್ನುಗ್ಗುತ್ತಿದೆ.. ಅಭಿಮಾನಿಗಳಂತೂ ದರ್ಶನ್‌ ಝಲಕ್‌ ನೋಡಿ ಕುಣಿದು ಕುಪ್ಪಳಿಸ್ತಿದ್ದಾರೆ.. ಎರಡೇ ನಿಮಿಷದ ಟ್ರೈಲರ್‌ ಇಡೀ ಸಿನಿಮಾ ವೈಭವವನ್ನ ತೆರೆದಿಟ್ಟಿದೆ.. ಅಚ್ಯುತ್‌ ರಾಮ್‌, ರಮೇಶ್‌ ಇಂದಿರಾ, ವಿನಯ್‌ ಗೌಡ ಖಡಕ್‌ ವಿಲನ್‌ಗಳಾಗಿ ಅಬ್ಬರಿಸಿದ್ದಾರೆ.. ಇಂತಹ ವಿಲನ್‌ಗಳಿಗೆ ಟಕ್ಕರ್‌ ಕೊಡಲು ಧನುಷ್‌ ಅಲಿಯಾಸ್‌ ಡೆವಿಲ್‌ ಪಾತ್ರದಲ್ಲಿ ದರ್ಶನ್‌ ಚಿಂದಿ ಉಡಾಯಿಸಿದ್ದಾರೆ..…

Read More

ಕಾಮಿಡಿ ಶೋಗಳ ಮೂಲಕ ಪ್ರವರ್ಧಮಾನಕ್ಕೆ ಬಂದು, ಇದೀಗ ಬಿಗ್ ಬಾಸ್ ಶೋನಲ್ಲಿಯೂ ಸ್ಪರ್ಧಿಯಾಗಿ ಮಿಂಚುತ್ತಿರುವವರು ಗಿಲ್ಲಿ ನಟ. ಗಿಲ್ಲಿ ನಾಯಕನಾಗಿ ನಟಿಸಿರುವ ಸೂಪರ್ ಹಿಟ್ ಚಿತ್ರವೀಗ ಬಿಡುಗಡೆಗೆ ತಯಾರಾಗಿ ನಿಂತಿದೆ. ವಿಜಯಾನಂದ್ ನಿರ್ದೇಶನದ ಈ ಸಿನಿಮಾದ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಈ ಕುರಿತಾದ ಪತ್ರಿಕಾಗೋಷ್ಠಿಯ ಮೂಲಕ ಚಿತ್ರತಂಡ ಒಟ್ಟಾರೆ ಸಿನಿಮಾದ ಬಗೆಗಿನ ಒಂದಷ್ಟು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದೆ. ಹೀಗೆ ಬಿಡುಗಡೆಗೊಂಡಿರುವಸೂಪರ್ ಹಿಟ್’ ಟೀಸರ್ ಸು ಫ್ರಂ ಸೋ ನಂತರದಲ್ಲಿ ಮತ್ತೊಂದು ಮಟ್ಟದ ಕಾಮಿಡಿಯ ಮೂಲಕ ಸಂಚಲನ ಸೃಷ್ಟಿಸುವ ಲಕ್ಷಣಗಳು ದಟ್ಟವಾಗಿ ಕಾಣಿಸುತ್ತಿವೆ. ಸಿನಿಮಾವೊಂದು ಬಿಡುಗಡೆಯಾದ ನಂತರ ಸೂಪರ್ ಹಿಟ್ ಆಗೋದು ವಾಡಿಕೆ. ಆದರೆ, ಈ ಸಿನಿಮಾದ ಶೀರ್ಷಿಕೆಯೇ ಸೂಪರ್ ಹಿಟ್. ರನ್ನಿಂಗ್ ಸಕ್ಸಸ್‌ಫುಲಿ ಎಂಬ ಟ್ಯಾಗ್ ಲೈನ್ ಅದಕ್ಕಿದೆ. ಹೀಗೆ ಶೀರ್ಷಿಕೆಯ ಮೂಲಕವೇ ಗಮನ ಸೆಳೆದಿದ್ದ ಈ ಸಿನಿಮಾದ ಟೈಟಲ್ಲು ಹುಟ್ಟಿದ ಬಗೆಗಿನ ಇಂಟರೆಸ್ಟಿಂಗ್ ಸಂಗತಿಯನ್ನು ನಿರ್ದೇಶಕ ವಿಜಯಾನಂದ ಈ ಸಂದರ್ಭದಲ್ಲಿ ಹಂಚಿಕೊಂಡಿದ್ದಾರೆ. ಒಂದಷ್ಟು ಏಳುಬೀಳು ಕಂಡಿದ್ದ ಈ ಸಿನಿಮಾ ನಿರ್ಮಾಪಕರಾದ…

Read More

JHS ತನ್ನ ಬಹುನಿರೀಕ್ಷಿತ ಮೆಡಿಕಲ್ ಡ್ರಾಮಾ ಸರಣಿ “ಹಾರ್ಟ್‌ಬೀಟ್” ಅನ್ನು ಕನ್ನಡದಲ್ಲಿ 28 ನವೆಂಬರ್ 2025ರಿಂದ ಪ್ರಾರಂಭಿಸುತ್ತಿದೆ. 100 ಎಪಿಸೋಡ್‌ಗಳನ್ನು ಒಳಗೊಂಡಿರುವ ಈ ಭವ್ಯ ಸೀಸನ್, ವೈದ್ಯಕೀಯ ಲೋಕದ ಸವಾಲುಗಳು, ಸಂಬಂಧಗಳ ಸಂಘರ್ಷಗಳು ಮತ್ತು ಮಾನವೀಯ ಭಾವನೆಗಳ ರೋಚಕ ಸಂಯೋಜನೆಯನ್ನು ಪ್ರೇಕ್ಷಕರಿಗೆ ಆವರಿಸುವಂತೆ ತರುತ್ತದೆ. ಈ ಶೋಗೆ ಪ್ರೇಕ್ಷಕರಿಂದ ಅತ್ಯಂತ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, IMDB ರೇಟಿಂಗ್ 8.6 ಅನ್ನು ಪಡೆದುಕೊಂಡಿದೆ. ಇದು ಸರಣಿಯ ಗುಣಮಟ್ಟ ಮತ್ತು ಭಾವುಕ ಕಥನಕ್ಕೆ ಸಾಕ್ಷಿಯಾಗುತ್ತದೆ. ಮುಖ್ಯ ಪಾತ್ರದಲ್ಲಿ ದೀಪಾ ಬಾಲು, ಅನುಮೋಲ್, ಚಾರುಕೇಶ್, ಕಾರ್ತಿಕ್ ಕುಮಾರ್ ಮತ್ತು ಹಲವಾರು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಸರಣಿಯನ್ನು ದೀಪಕ್ ಸುಂದರರಾಜನ್ ಬರೆದು, ದೀಪಕ್ ಸುಂದರರಾಜನ್, ಅಬ್ದುಲ್ ಕಬೀಝ್ ಮತ್ತು ಚಿದಂಬರಂ ಮಣಿವಣ್ಣನ್ ನಿರ್ದೇಶಿಸಿದ್ದಾರೆ. ಅಮೇರಿಕದ ಖ್ಯಾತ ಮೆಡಿಕಲ್ ಡ್ರಾಮಾಗಳಾದ ನ್ಯೂ ಆಮ್ಸ್‌ಟರ್ಡ್ಯಾಮ್ ಮತ್ತು ಗ್ರೇ’ಸ್ ಅನಾಟಮಿಯ ಶೈಲಿಯನ್ನು ಹೋಲುವ ಈ ಸರಣಿ, ಗಾಲ್ಪಿಕ RK ಮಲ್ಟಿ-ಸ್ಪೆಷಾಲಿಟಿ ಹಾಸ್ಪಿಟಲ್ ಅನ್ನು ಹಿನ್ನಲೆಯಲ್ಲಿ ಇಟ್ಟುಕೊಂಡಿದೆ. ಇಲ್ಲಿ ಸರ್ಜಿಕಲ್ ಇಂಟರ್ನ್‌ಗಳು,…

Read More

ಬೀದರ್‌, ನವೆಂಬರ್‌ 30: ಮರಾಠಾ ಸಮಾಜದ ಬಂಧುಗಳು ಕಷ್ಟದಲ್ಲಿದ್ದಾರೆ. ನಾವೆಲ್ಲ ಒಂದಾಗಿ ಒಗ್ಗಟ್ಟಾಗಿ ಸಾಗೋಣ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಕರೆ ನೀಡಿದರು. ಬೀದರ್‌ನ ಗಣೇಶ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸ್ವಾಭಿಮಾನಿ ಮರಾಠಾ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಕಾರ್ಯಕ್ರಮ ವಿಶೇಷವಾಗಿದೆ. ಬೀದರ್‌ಗೆ ಹಲವಾರು ಬಾರಿ ಬಂದಿದ್ದೆ. ಆಗ ನಮ್ಮ ಸಮಾಜದ ಮುಖಂಡರು ಸಂಘಟನೆ ಮಾಡಬೇಕು, ಸಮಾಜವನ್ನು ಒಂದು ಗೂಡಿಸಬೇಕು ಎಂದು ಮಾತನಾಡಿದ್ದೇವೆ ಈಗ ಕಾಲ ಕೂಡಿ ಬಂದಿದೆ. ಸಮಾಜದ ಎಲ್ಲಾ ಮುಖಂಡರು ಶ್ರದ್ಧೆಯಿಂದ ಕಷ್ಟ ಬಿದ್ದು ಸಮಾಜದ ಬಂಧುಗಳನ್ನು ಸೇರಿಸಿದ್ದೀರಾ. ಇದಕ್ಕಾಗಿ ನಿಮಗೆ ಧನ್ಯವಾದಗಳು ಎಂದರು. ಛತ್ರಪತಿ ಶಿವಾಜಿ ಮಹಾರಾಜರು ಇಡೀ ವಿಶ್ವದಲ್ಲೇ ಜಾತ್ಯತೀತ ನಾಯಕರಾಗಿದ್ದರು. ಅವರು ಮೊಘಲರ ವಿರುದ್ಧವಿದ್ದರು. ಮುಸ್ಲಿಮರ ವಿರುದ್ಧ ಅಲ್ಲ. ಇದನ್ನು ನಾವು ತಿಳಿಯಬೇಕು ಎಂದರು. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ಸಹಾಯ ಮಾಡಿ ಲಂಡನ್‌ಗೆ ಹೋಗಿ ಉನ್ನತ ಅಧ್ಯಯನ ಮಾಡಲು ಸಹಾಯ…

Read More

ರಾಜ್ಯ ರಾಜಕಾರಣದಲ್ಲಿ ಸದ್ಯ ಪವರ್‌ ಶೇರಿಂಗ್‌ ವಿಚಾರ ಜೋರಾಗಿದೆ. ಮುಖ್ಯಮಂತ್ರಿ ಹುದ್ದೆ ಸಂಬಂಧಿಸಿ ಘಟಾನುಘಟಿ ರಾಜಕಾರಣಿಗಳಿಂದ ಹಿಡಿದು, ಮಠಾಧೀಶರು, ಸಂಘಟನೆಗಳ ಮುಖಂಡರಿಂದ ಪ್ರಮುಖ ನಾಯಕರ ಪರ-ವಿರುದ್ಧ ಹೇಳಿಕೆಗಳು ಕೇಳಿಬರುತ್ತಿವೆ. ಆದ್ರೆ ಸದ್ಯ ಉಪ ಮುಖ್ಯಮಂತ್ರಿಯಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಮಹತ್ವದ ಜವಾಬ್ದಾರಿಗಳನ್ನು ನಿಭಾಯಿಸುತ್ತ ಮುಖ್ಯಮಂತ್ರಿ ಕುರ್ಚಿಗೆ ಸನಿಹದಲ್ಲಿರುವ ಡಿ.ಕೆ. ಶಿವಕುಮಾರ್‌ ಅವರು ಒಂದುಕಡೆ ವಚನ ಪಾಲನೆಯ ಅವಶ್ಯಕತೆಯನ್ನು ಪ್ರತಿಪಾದಿಸುತ್ತಲೇ ಇನ್ನೊಂದುಕಡೆ ತಾವು ಸಾಗಿಬಂದ ಕಷ್ಟದ ದಿನಗಳಲ್ಲಿ ಬೆಂಬಲವಾಗಿ ಜೊತೆಗೆ ನಿಂತವರನ್ನು ನೆನಪಿಸಿಕೊಳ್ಳುತ್ತ ದೊಡ್ಡತನ ಮೆರೆದಿದ್ದಾರೆ. ಅಧಿಕಾರದಲ್ಲಿರುವಾಗ ಯಾರು ಬೇಕಾದರೂ ಪರವಾಗಿ ನಿಲ್ಲುತ್ತಾರೆ. ಪೂಜೆ-ಪುನಸ್ಕಾರಗಳನ್ನೂ ಮಾಡುತ್ತಾರೆ. ಆದ್ರೆ ಕಷ್ಟದ ದಿನಗಳಲ್ಲಿ ಜೊತೆಗೆ ನಿಂತವರು, ತಮಗಾಗಿ ಮರುಗಿದವರನ್ನು ಮರೆಯೋದಿಲ್ಲ ಅಂತ ಡಿ.ಕೆ. ಶಿವಕುಮಾರ್‌ ಸ್ಪಷ್ಟವಾಗಿ ಹೇಳಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ಜೊತೆಗೆ ನಿಂತವರ ಬಗ್ಗೆ ವಿವರಿಸುತ್ತಲೇ ಅವರು ಸ್ಮರಿಸಿಕೊಂಡಿದ್ದು ಒಬ್ಬರ ಹೆಸರು. ಅದುವೇ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡರದ್ದು. 2019ರ ಸೆಪ್ಟೆಂಬರ್‌ ತಿಂಗಳಲ್ಲಿ ಅಕ್ರಮ ಆಸ್ತಿಗಳಿಕೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದಿಂದ ಡಿ.ಕೆ. ಶಿವಕುಮಾರ್‌…

Read More

ಸಾಂಸ್ಕೃತಿಕವಾಗಿ ಸಮೃದ್ಧವಾಗಿರೋ ನಮ್ಮ ಕರ್ನಾಟಕದ ವೈಭವವನ್ನು ಜನರಿಗೆ ತಿಳಿಸೋಕೆ ಆರಂಭಿಸಿದ ಸ್ಟಾರ್‌ ಸುವರ್ಣದ ಹೆಮ್ಮೆಯ ಕಥೆ ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ. ಕಥೆಯೊಂದು ಜನರ ಮನ ಮುಟ್ಬೇಕು ಅಂದ್ರೆ ಅದರಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯಗಳ ಛಾಪು ಇರಬೇಕು. ಕರುನಾಡ ಸಂಸ್ಕೃತಿ ಹಾಸು ಹೊಕ್ಕಾಗಿರೋ ಕಥೆಯನ್ನು ನಾವು ಆಯ್ಕೆ ಮಾಡುವಾಗ ನಮ್ಮಲ್ಲಿದ್ದ ಉದ್ದೇಶವೊಂದೇ ನಮ್ಮ ನೆಲದ ಕಥೆಯನ್ನ ಪ್ರತಿಯೊಬ್ಬ ಕನ್ನಡಿಗನೂ ಅರಿಯಬೇಕು ಎಂಬುದು. ಪೌರಾಣಿಕ ಕಥಾಹಂದರ ಹೊಂದಿರೋ ಉಧೋ ಉಧೋ ಶ್ರೀ ರೇಣುಕಾ-ಯಲ್ಲಮ್ಮರ ಕಥೆಯು ಇಂದು ದೇಶದ ಬೇರೆ ಬೇರೆ ಭಾಗಗಳಲ್ಲಿರುವ ಕನ್ನಡಿಗರ ಮನ ಗೆದ್ದಿದೆ. ವಿಭಿನ್ನ ಪ್ರಯೋಗ, ಪೌರಾಣಿಕ ಹಿನ್ನೆಲೆಯ ಜೊತೆಗಿನ ಈ ಜರ್ನಿ ಇಂದು 1000 ಸಂಚಿಕೆಗಳ ದಾಖಲೆಗೆ ಸಾಕ್ಷಿಯಾಗಿದೆ. ಪ್ರತಿ ನಿತ್ಯ ನಮ್ಮ ರೇಣುಕಾ – ಯಲ್ಲಮ್ಮರ ಬಗೆಗಿನ ಕಥೆಯ ಬಗ್ಗೆ ಮೆಸೇಜುಗಳು, ಫೀಡ್‌ಬ್ಯಾಕ್‌ಗಳು ಬಂದಾಗ ಈ ಪಯಣದ ಬಗ್ಗೆ ಖುಷಿಯಾಗುತ್ತದೆ. ರೇಣುಕಾ – ಯಲ್ಲಮ್ಮರ ಕಥೆಗಳು ನಿಮ್ಮ ಮನ ಮುಟ್ಟಿದೆ ಎಂಬುದೇ ನಮ್ಮ ಗೆಲುವನ್ನು ಸೂಚಿಸುತ್ತೆ.…

Read More

ಕಡುಬಡತನದಲ್ಲಿ ಹುಟ್ಟಿ ಬೆಳೆದು ಉನ್ನತ ಹುದ್ದೆ ಅಲಂಕರಿಸಿದ್ದ ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್‌ ಬೀಳಗಿ‌ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಆದ್ರೆ, ಅವರ ನಿಧನ ಇಡೀ ಕರುನಾಡಿನ ಮನ ಮಿಡಿಯುವಂತೆ ಮಾಡಿದೆ. ಅವರ ಕಾರ್ಯವೈಖರಿಯಿಂದಲೇ ಸದ್ದು ಮಾಡಿದ್ದ ಮಹಾಂತೇಶ್‌ ಬೀಳಗಿ ಅವರ ಸಾಧನೆ, ಅವರು ಆಡಿದ್ದ ಮಾತುಗಳು ಈಗ ಹೆಚ್ಚು ಸದ್ದು ಮಾಡುತ್ತಿವೆ. ಈ ಹಿಂದೆ ಬೆಸ್ಕಾಂನ ಎಂಡಿ ಆಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸೇರಿ ಐವರ ಜೊತೆ ಮಹಾಂತೇಶ್‌ ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ರು. ಈ ವೇಳೆ, ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರು ಪಲ್ಟಿಯಾಗಿ ಮಹಾಂತೇಶ್‌ ಜೀವ ಬಿಟ್ಟಿದ್ದಾರೆ. ಇನ್ನು, ಮಹಾಂತೇಶ್‌ ಬೀಳಗಿಯವರ ಊರು ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣ. ಕಡುಬಡತನದಲ್ಲಿ ಹುಟ್ಟಿದ್ದ ಮಹಾಂತೇಶ್‌ ಐಎಎಸ್‌ ಅಧಿಕಾರಿಯಾಗಿದ್ದೇ ರೋಚಕ. ಡಿಗ್ರಿವರೆಗೂ ರಾಮದುರ್ಗದಲ್ಲಿ ಓದಿದ್ದ…

Read More