Author: vikimasters

ಕೃಷಿ ಕಾರ್ಯಕ್ಕೆ ಎತ್ತುಗಳಿಲ್ಲದೆ ಜಮೀನಿನಲ್ಲಿ ದೈಹಿಕ ಶ್ರಮದಲ್ಲಿ ಉಳುಮೆ ಮಾಡುತ್ತಿದ್ದ ಕಲಘಟಗಿ ತಾಲೂಕಿನ ತುಮರಿಕೊಪ್ಪ ಗ್ರಾಮದ ರೈತನಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಜೋಡೆತ್ತು ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ನೇಗಿಲ ಯೋಗಿಯ ಕಷ್ಟಕ್ಕೆ ಮಿಡಿದ ಲಾಡ್‌ತುಮರಿಕೊಪ್ಪದ 62 ವರ್ಷದ ಜಂಬುಲಿಂಗ ಬಸವಣ್ಣೆಪ್ಪ ಅಂಗಡಿ ಹಾಗೂ ಅವರ ಪತ್ನಿ ಸಂಗವ್ವ ಅಂಗಡಿ ಅವರು ಕಳೆದ ಐದಾರು ವರ್ಷಗಳಿಂದ ಎತ್ತುಗಳಿಲ್ಲದ ಕಾರಣ ದೈಹಿಕ ಶ್ರಮ ಬಳಸಿ ಎಡೆಕುಂಟೆ ಹೊಡೆಯುತ್ತಿದ್ದರು. ಇತ್ತೀಚೆಗೆ ಗೋವಿನ ಜೋಳದ ಹೊಲದಲ್ಲಿ ಕೈಗಳಿಂದ ಎಡೆಕುಂಟೆ ಹೊಡೆಯುತ್ತಿದ್ದುದು ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಈ ವಿಷಯ ಸಚಿವ ಸಂತೋಷ್‌ ಲಾಡ್‌ ಅವರಿಗೆ ತಿಳಿದಿದ್ದೇ ತಡ ಕಲಘಟಗಿಯ ಜಾನುವಾರು ಸಂತೆಯಲ್ಲಿ ಹಳ್ಳಿಕಾರ್‌ ತಳಿಯ ಜೋಡೆತ್ತು ಖರೀದಿಸಿ ಜಂಬುಲಿಂಗ ಅವರಿಗೆ ಕೊಡಿಸಿದರು. ಈ ಎತ್ತಿಗಳ ಬೆಲೆ ಬರೋಬ್ಬರಿ ರೂ. 1.50 ಲಕ್ಷ. ಇನ್ನು ಸಚಿವರ ಈ ಕಾಳಜಿಗೆ ಅಪಾರ ಪ್ರಶಂಸೆ ವ್ಯಕ್ತವಾಗಿದ್ದು, ನೇಗಿಲ ಯೋಗಿಯ ಕಷ್ಟಕ್ಕೆ ಮಿಡಿದದ್ದಕ್ಕೆ ರೈತ ಧನ್ಯವಾದ ತಿಳಿಸಿದ್ದಾರೆ.…

Read More

ಬೆಂಗಳೂರು, 07-05-2025: ಜೀ಼ ಕನ್ನಡ (Zee Kannada) ವಾಹಿನಿ ತನ್ನ ವಿಶಿಷ್ಟವಾದ ಕಾರ್ಯಕ್ರಮಗಳೊಂದಿಗೆ ವೀಕ್ಷಕರನ್ನು ಮನರಂಜಿಸುತ್ತಾ ಬಂದಿದೆ. ಆಕರ್ಷಕ ಧಾರಾವಾಹಿಗಳು, ರೋಚಕ ರಿಯಾಲಿಟಿ ಶೋಗಳು ಮತ್ತು ಬ್ಲಾಕ್‌ಬಸ್ಟರ್ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್‌ಗಳ ಮೂಲಕ ಜೀ಼ ಕನ್ನಡ ವಾಹಿನಿ ನಿರಂತರವಾಗಿ ಮೊದಲ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಜೀ಼ ಕನ್ನಡ ವಾಹಿನಿ ಮಗದೊಮ್ಮೆ ತನ್ನ ಪ್ರೇಕ್ಷಕರಿಗೆ ಮತ್ತೊಂದು ಮನರಂಜನೆಯನ್ನ ನೀಡಲು ಇದೇ ಭಾನುವಾರ ಮಧ್ಯಾಹ್ನ 3 ಗಂಟೆಗೆ ಶರಣ್ ಅಭಿನಯದ ‘ಛೂ ಮಂತರ್’ಸಿನೆಮಾವನ್ನು ನಿಮಗಾಗಿ ಹೊತ್ತುತರುತ್ತಿದೆ.ಡೈನಮೊ (ಶರಣ್)(Sharan), ಆರ್ ಜೆ (ಚಿಕ್ಕಣ್ಣ), ಆಕಾಂಕ್ಷಾ (ಅದಿತಿ) ಮತ್ತು ನಕುಲ್ ಛೂಮಂತರ್ ಆ್ಯಂಡ್ ಕಂಪನಿ ಎಂಬ ಘೋಸ್ಟ್ ಹಂಟರ್ ನಡೆಸುತ್ತಿರುತ್ತಾರೆ ಮತ್ತು ಇವರಿಗೆ ಆತ್ಮಗಳ ಭೇಟೆಯಾಡೋದು ಕೆಲಸವಾಗಿರುತ್ತದೆ. ಭಾರತದ ಟಾಪ್ 10 ಹಾಂಟೆಡ್ ಹೌಸ್ ಗಳ ಸಾಲಿಗೆ ಉತ್ತರಾಖಂಡದ ನೈನಿತಾಲ್ ನಲ್ಲಿರುವ ಮಾರ್ಗನ್ ಹೌಸ್ ಸೇರ್ಪಡೆಯಾಗಿರುವ ವಿಷಯ ತಿಳಿಯುತ್ತದೆ. ಬ್ರಿಟಿಷರ ಕಾಲದ ನಿಧಿ ಇರುವ ಈ ಮಾರ್ಗನ್ ಹೌಸ್ ಗೆ ಹೋಗ್ತಾರೆ. ಹಾಸ್ಯದಿಂದ ಶುರುವಾಗುವ ಈ ಚಿತ್ರ…

Read More

ನಮ್ಮ ಸುತ್ತಮುತ್ತ ಅದೆಷ್ಟೋ ಕಥೆಗಳು ಇರುತ್ತವೆ.. ಅದೆಷ್ಟೋ ವಿಚಿತ್ರ ಕ್ಯಾರೆಕ್ಟರ್(Character) ಗಳು ಇರ್ತಾರೆ. ಆ ಕ್ಯಾರೆಕ್ಟರ್ ಗಳನ್ನೆ ಇಟ್ಟುಕೊಂಡು ಸಿನಿಮಾ (Cinema)ಮಾಡಿದಾಗ ಸಾಕಷ್ಟು ಜನರನ್ನ ತಲುಪಲಿದೆ. ಅಂಥದ್ದೊಂದು ಕಥೆಯನ್ನ ಹೊತ್ತು ಬರ್ತಾ ಇರೋದೆ ರಾಜರತ್ನಾಕರ ಸಿನಿಮಾ. ಈ ಸಿನಿಮಾದಲ್ಲಿ ಬೆಂಗಳೂರಿನ ಮಧ್ಯಮ ವರ್ಗದವರ ಕಥೆಯನ್ನ ಒಳಗೊಂಡಿದೆ. ದುರಹಂಕಾರಿಯೊಬ್ಬನ ಕಥೆ. ಸೋಮಾರಿತನದಿಂದ ಬಂದಂತ ದುರಹಂಕಾರದ ಪರಮಾವಧಿ. ಆದರೆ ಮುಂದೆ ಆತ ಜೀವನ ಕಟ್ಟಿಕೊಳ್ಳುವುದು ಹೇಗೆ ಎಂಬ ಕಥೆಯನ್ನ ರಾಜರತ್ನಕರದಲ್ಲಿ ತೋರಿಸಿಲಾಗಿದೆ. ಈ ರೀತಿಯ ಕ್ಯಾರೆಕ್ಟರ್(Character) ಹಲವು ಮನೆಗಳಲ್ಲಿ ಇರಬಹುದು. ಅವರೆಲ್ಲರಿಗೂ ಈ ಕಥೆ ಕನೆಕ್ಟ್ ಆಗುತ್ತದೆ. ಇದೊಂದು ಪಕ್ಕ ಕಮರ್ಷಿಯಲ್ ಸಿನಿಮಾ ಆಗಿದೆ. ಚೌಮುದ ಬ್ಯಾನರ್ ಅಡಿ ಚೊಚ್ಚಲ ಬಾರಿಗೆ ನಿರ್ಮಾಣವಾಗಿರುವ ರಾಜರತ್ನಾಕರ ಚಿತ್ರಕ್ಕೆ ಜಯರಾಮ ಸಿಮಾಲೂರು ಅವರು ಬಂಡವಾಳ ಹೂಡಿದ್ದಾರೆ. ವೀರೇಶ್ ಬೊಮ್ಮ ಸಾಗರ ಅವರು ಆಕ್ಷನ್ ಕಟ್ ಹೇಳಿದ್ದಾರೆ. ಇದು ಅವರ ನಿರ್ದೇಶನದಲ್ಲಿ ಬಂದಂತ ಮೊದಲ ಸಿನಿಮಾ. ವೀರೇಶ್ ಬೊಮ್ಮ ಸಾಗರ ಅವರು ಮೂಲತಃ ಬಾದಾಮಿ ಕಡೆಯವರು. ಹನ್ನೆರಡು ವರ್ಷದಿಂದ…

Read More

ಸ್ವಾಮಿ ವಿವೇಕಾನಂದರ(Swami Vivekananda) ಜೀವನ ಕುರಿತ ವೀರ ಸಂನ್ಯಾಸಿಯ ಆತ್ಮಗೀತೆಯು (The Song of the Sannyasin) ಮತ್ತೊಮ್ಮೆ ನಿಮ್ಮ ಮುಂದೆ ಪ್ರದರ್ಶನಕ್ಕೆ ಸಜ್ಜಾಗಿದೆ.. ಏಪ್ರಿಲ್‌ 25ಕ್ಕೆ ಸಂಜೆ 6.30ಕ್ಕೆ ಬೆಂಗಳೂರಿನ ಮಲ್ಲೆಶ್ವರಂನ ಚೌಡಯ್ಯ ಹಾಲ್‌ನಲ್ಲಿ ಪರಮ್ ಕಲ್ಚರ್ ಅರ್ಪಿಸುತ್ತಿರುವ ವೀರ ಸಂನ್ಯಾಸಿಯ ಆತ್ಮಗೀತೆ ಪ್ರದರ್ಶನಗೊಳ್ಳಲಿದೆ. ಇದು ಸಂಗೀತ, ನೃತ್ಯ, ನಾಟಕಗಳ ಮೂಲಕ ಸ್ವಾಮಿ ವಿವೇಕಾನಂದರ ಜೀವನ – ಚಿಂತನೆಗಳನ್ನ ವಿಜೃಂಭಣಾತ್ಮಕವಾಗಿ ತೋರಿಸುವ ಒಟ್ಟು 2 ಗಂಟೆಗಳ ಕಾಲಾವಧಿಯ ಪ್ರದರ್ಶನವಾಗಿದೆ. ಸುಮಾರು 35ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರು ಭಾಗವಹಿಸಲಿದ್ದಾರೆ.. ಇನ್ನು, ಸ್ವತಃ ಸ್ವಾಮಿ ವಿವೇಕಾನಂದರಿಂದಲೇ ಇಂಗ್ಲಿಷ್, ಬಂಗಾಳಿ, ಸಂಸ್ಕೃತದಲ್ಲಿ ರಚಿಸಲ್ಪಟ್ಟ ಹಾಡುಗಳು ಹಾಗೂ ಕನ್ನಡದ ಮೇರು ಕವಿಗಳಾದ ಜಿ.ಎಸ್.ಶಿವರುದ್ರಪ್ಪ ಹಾಗೂ ಕುವೆಂಪುರವರ ಇನ್ನೂ ಹಲವು ಪ್ರಖ್ಯಾತ ಕವಿಗಳು ವಿವೇಕಾನಂದರ ಬಗ್ಗೆ ಬರೆದ ಹಾಡಗಳನ್ನ ಇಲ್ಲಿ ಪ್ರದರ್ಶಿಸಲಿದ್ದಾರೆ.. ಇನ್ನು ವಿಶೇಷವೆಂದರೆ, ಜನವರಿಯಲ್ಲೇ ಪ್ರದರ್ಶಿಸಲ್ಪಟ್ಟಿದ್ದ ವೀರ ಸಂನಾಸಿಯ ಆತ್ಮಗೀತೆ ಜನಮನ ಗೆದ್ದಿತ್ತು.. ಹೀಗಾಗಿ ಈ ಆತ್ಮಗೀತೆಗೆ ಪೇಕ್ಷಕರ ಬೇಡಿಕೆ ಹೆಚ್ಚಾಗಿತ್ತು.. ಇದೀಗ ಪ್ರೇಕ್ಷಕರ…

Read More

ಮನರಂಜನೆ ಅಂತ ಬಂದಾಗ ಕನ್ನಡಿಗರ ಮೊದಲ ಆಯ್ಕೆಯೇ ‘ಸ್ಟಾರ್ ಸುವರ್ಣ'(Star Suvarna). ಆಸೆ, ನಿನ್ನಜೊತೆ ನನ್ನಕಥೆ, ನೀನಾದೆ ನಾ, ರೇಣುಕಾ ಯಲ್ಲಮ್ಮ, ಎಡೆಯೂರು ಶ್ರೀ ಸಿದ್ಧಲಿಂಗೇಶ್ವರದಂತಹ ಧಾರಾವಾಹಿಗಳು ಈಗಾಗಲೇ ಪ್ರೇಕ್ಷಕರ ಮನಗೆದ್ದು ಯಶಸ್ಸಿನ ಮೆಟ್ಟಿಲೇರಿದೆ. ಈ ಸಾಲಿಗೆ ಸೇರಲಿರುವ ಹೊಸ ಕಥೆ ‘ಶಾರದೆ(Sharade)’.ಜಗತ್ತಿನ ಎಲ್ಲಾ ಪ್ರೀತಿಯನ್ನು ಧಾರೆಯೆರೆಯೋ ನಿಷ್ಕಲ್ಮಶ ಜೀವ ಅಂದ್ರೆ ಅದು ‘ಅಮ್ಮ’. ಈ ಕಥೆಯಲ್ಲೂ ಅಷ್ಟೇ ನಾಯಕಿ ಶಾರದಾ ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದರೂ ಯಾರೋ ಮಾಡಿದ ಕುತಂತ್ರದಿಂದ ಬಡತನದಲ್ಲಿ ಬೆಳೆದಿರುತ್ತಾಳೆ. ಗಂಡ ಮಾಡಿದ ಮೋಸದಿಂದಾಗಿ ಎಷ್ಟೇ ನೋವಿದ್ದರೂ ಈಕೆ ತನ್ನ ಮಗಳಿಗಾಗಿ ಹೋರಾಡುತ್ತಾ ಜೀವನ ನಡೆಸುತ್ತಿರ್ತಾಳೆ. ಇನ್ನೊಂದೆಡೆ ಕೂಡು ಕುಟುಂಬದಲ್ಲಿ ಬೆಳೆದಿರೋ ನಾಯಕ ಸಿದ್ದಾರ್ಥ್, ಇಷ್ಟವಿಲ್ಲದಿದ್ದರೂ ಅತ್ತೆ ಮಗಳಾದ ಜ್ಯೋತಿಕಾಳ ಜೊತೆ ಮದುವೆಯಾಗಲು ತಯಾರಾಗಿರ್ತಾನೆ. ಆದರೆ ಈ ಮನೆಗೆ ಮನೆಕೆಲಸದವಳಾಗಿ ಬರೋ ಶಾರದಾಳ ಬದುಕಲ್ಲಿ ಮುಂದೆ ಏನೆಲ್ಲಾ ತಿರುವುಗಳು ಬರಲಿದೆ? ಕಷ್ಟ, ನೋವು, ಅವಮಾನಗಳನ್ನೇ ಎದುರಿಸುತ್ತಾ ಬಂದಿರೋ ಶಾರದೆಗೆ(Sharade) ತನ್ನ ಜನ್ಮರಹಸ್ಯದ ಬಗ್ಗೆ ತಿಳಿಯುತ್ತಾ? ಒಬ್ಬಂಟಿಯಾಗಿ ಬದುಕುತ್ತಿರೋ ಶಾರದೆಯ…

Read More

6 ಮಾರ್ಚ್ 2025, ಬೆಂಗಳೂರು: ವೇದ ಆಗಮ ಸಂಸ್ಕೃತ ಮಹಾ ಪಾಠಶಾಲೆಯ 22ನೇ ವಾರ್ಷಿಕೋತ್ಸವವನ್ನು ದಿ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ವೇದಾಧ್ಯಯನದ ಪ್ರಮುಖ ಸಂಸ್ಥೆಗಳಲ್ಲೊಂದಾದ ಈ ಪಾಠಶಾಲೆಯ ವಾರ್ಷಿಕ ಕಾರ್ಯಕ್ರಮವು ಗುರುದೇವ ಶ್ರೀ ಶ್ರೀ ರವಿ ಶಂಕರ್ ಅವರ ದಿವ್ಯ ಆಶೀರ್ವಾದದೊಂದಿಗೆ ನೆರವೇರಿತು. ಈ ಸಂದರ್ಭದಲ್ಲಿ ವಿದ್ವತ್ಪೂರ್ಣ ಸಮ್ಮೇಳನ, ಭವ್ಯ ಪ್ರದರ್ಶನ ಹಾಗೂ ಬಹು-ನಿರೀಕ್ಷಿತ ಪದವೀಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ರತ್ನಗಿರಿಯ ಶ್ರೀ ಬಾಲಮುರುಗನ್ ದೇವಸ್ಥಾನದ ಶ್ರೀ ಬಾಲಮುರುಗನ್ ಆದಿಮಾಯಿ ಸ್ವಾಮಿಗಳು ಮುಖ್ಯ ಅತಿಥಿಯಾಗಿ ಪದವೀಪ್ರದಾನ ಭಾಷಣವನ್ನು ನೀಡಿದರು. ಈ ಸಂದರ್ಭದಲ್ಲಿ 48 ವಿದ್ಯಾರ್ಥಿಗಳಿಗೆ ಶಿವಾಗಮ ವಿದ್ಯಾನಿಧಿ(Shivagama Vidyanidhi) ಎಂಬ ಗೌರವಾನ್ವಿತ ಪದವಿ ಪ್ರದಾನ ಮಾಡಲಾಯಿತು. ಅವರು ವೇದ ಆಗಮ ಶಾಸ್ತ್ರಗಳಲ್ಲಿ ಎಂಟು ವರ್ಷಗಳ ಕಠಿಣ, ಸಮಗ್ರ ವಸತಿ ಅಧ್ಯಯನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಈ ಪದವೀಧರರಲ್ಲಿ ಹಲವರು ದೇಶ-ವಿದೇಶಗಳ ಗೌರವಾನ್ವಿತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾಗಿದ್ದು, ಭವ್ಯ ವೇದ ಪರಂಪರೆಯನ್ನು ಮುಂದುವರಿಸುತ್ತಿದ್ದಾರೆ. ಈ ಅದ್ಭುತ ಕ್ಷಣಕ್ಕೆ ಮತ್ತಷ್ಟು…

Read More

ಉದಿತ್ ನಾರಾಯಣ್ (Udit Narayan)ಭಾರತದ ಖ್ಯಾತ ಗಾಯಕ. ದಶಕಗಳಿಂದಲೂ ಭಾರತೀಯ ಚಿತ್ರರಂಗದ ಮೇರು ಗಾಯಕ ಎನಿಸಿಕೊಂಡಿದ್ದಾರೆ. ಎಸ್​ಪಿ ಬಾಲಸುಬ್ರಹ್ಮಣ್ಯಂ ಬಳಿಕ ಚಿತ್ರರಂಗದ ಹಿರಿಯ ಮತ್ತು ಗೌರವಾನ್ವಿತ ಗಾಯಕ ಎನಿಸಿಕೊಂಡಿರುವವರು, ಆದರೆ ಇತ್ತೀಚೆಗೆ ನಡೆದಿರುವ ಘಟನೆಯೊಂದು ಅವರ ಇಷ್ಟು ವರ್ಷದ ಗೌರವವನ್ನು ಮಣ್ಣುಪಾಲು ಮಾಡುತ್ತಿದೆ. ಇದೀಗ ಆ ಕೆಟ್ಟ ಘಟನೆ ಬಗ್ಗೆ ಸ್ವತಃ ಉದಿತ್ ನಾರಾಯಣ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಉದಿತ್ ನಾರಾಯಣ್ (Udit Narayan) ಅವರು ಇತ್ತೀಚೆಗಷ್ಟೆ ಲೈವ್ ಕಾನ್ಸರ್ಟ್ ಒಂದನ್ನು ನಡೆಸಿಕೊಟ್ಟರು. ಕಾನ್ಸರ್ಟ್​ ವೇಳೆ ವೇದಿಕೆ ಬಳಿ ಇದ್ದ ಯುವತಿಯೊಬ್ಬಾಕೆ ಹಿರಿಯ ಗಾಯಕನೊಟ್ಟಿಗೆ ಸೆಲ್ಫಿ ತೆಗೆದುಕೊಳ್ಳಲು ಮುಂದಾದರು ಉದಿತ್ ನಾರಾಯಣ್ ಸಹ ವೇದಿಕೆ ಮೇಲೆ ಕುಳಿತುಕೊಂಡೆ ಅಭಿಮಾನಿಗೆ ಸೆಲ್ಫಿ ನೀಡಿದರು. ಆದರೆ ಆ ವೇಳೆ ಮಹಿಳಾ ಅಭಿಮಾನಿ ಉದಿತ್ ನಾರಾಯಣ್ ಅವರ ಕೆನ್ನೆಗೆ ಮುತ್ತು ಕೊಟ್ಟಳು. ಕೂಡಲೇ ಉದಿತ್ ನಾರಾಯಣ್, ಆ ಮಹಿಳಾ ಅಭಿಮಾನಿಯನ್ನು ಹಿಡಿದು ಎಳೆದುಕೊಂಡು ತುಟಿಗೆ ತುಟಿ ಒತ್ತಿ ಮುತ್ತು ಕೊಟ್ಟೇ ಬಿಟ್ಟರು. ಈ ಹಿಂದೆ ಇದೇ…

Read More

ಡೆಲ್ಲಿ ಬೆಡಗಿಗೆ​​ ಕ್ಲೀನ್​ ಬೋಲ್ಡ್ ಆದ್ರಾ ಅಭಿಷೇಕ್‌ ಶರ್ಮಾ? ಟೀಂ ಇಂಡಿಯಾದ ಯಂಗ್ ಓಪನರ್ ಅಭಿಷೇಕ್ ಶರ್ಮಾ ಐಪಿಎಲ್‌ನಲ್ಲಿ(IPL) ಸನ್‌ರೈಸರ್ಸ್ ಪರ ಆಡಿದ ನಂತರ ಟೀಮ್ ಇಂಡಿಯಾಗೆ ಪ್ರವೇಶಿಸಿದರು. ಅದರಲ್ಲೂ 2024ರ ಸೀಸನ್ ನಲ್ಲಿ ತಮ್ಮ ಆಕ್ರಮಣಕಾರಿ ಪ್ರದರ್ಶನದಿಂದ ಎಲ್ಲರ ಮನಗೆದ್ದಿದ್ದರು ಅಭಿಷೇಕ್‌ ಶರ್ಮಾ(Abhishek Sharma). ಈಗ ಇಂಗೆಂಡ್‌ ವಿರುದ್ಧದ ಟಿಟ್ವೆಂಟಿ ಸರಣಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ… ಸಧ್ಯ ಅವರ ಲವ್‌ ಸ್ಟೋರಿ ವಿಚಾರಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ವಾಂಖೆಡೆ ಅಂಗಳದಲ್ಲಿ ಬೌಂಡರಿಗಳ ಬೋರ್ಗರೆತ, ಸಿಕ್ಸರ್​​ಗಳ ಸುರಿಮಳೆ ಸುರಿಸಿದ ಯುವ ಆಟಗಾರ ಜಸ್ಟ್​​ 37 ಎಸೆತಕ್ಕೆ ಬಂದ ಸೆಂಚುರಿ ಚಚ್ಚಿ ಬಿಸಾಕಿದ್ರು. ಈ ಸೆನ್ಸೇಷನಲ್​ ಶತಕದ ಬಳಿಕ ಸೆಂಚುರಿ ಸ್ಟಾರ್​ ಸಿಂಗಲ್ಲಾ? ಅನ್ನೋ ಪ್ರಶ್ನೆಗೆ ಉತ್ತರದ ಹುಡುಕಾಟ ನಡೆದಿದೆ. ಅಭಿಷೇಕ್​ ಶರ್ಮಾ ಹೆಸ್ರಿನ ಜೊತೆ ಹಿಂದೆ ಹಲವು ಯುವತಿಯರ ಹೆಸರು ತಳುಕು ಹಾಕಿಕೊಂಡಿದ್ದು ಗೊತ್ತಿರಬಹುದು. ಆದ್ರೀಗ ಅಭಿಷೇಕ್​ ಲೈಫಲ್ಲಿ ಹೊಸ ಹುಡುಗಿಯ ಎಂಟ್ರಿಯಾಗಿದೆ. ಡೆಲ್ಲಿ…

Read More

ಮತ್ತೊಂದು ಮದುವೆಯಾಗಲು ಸಜ್ಜಾದ್ರಾ ಸಮಂತಾ? ನಾಗ ಚೈತನ್ಯ ಮತ್ತು ಸಮಂತಾ(Samantha) 2017 ರಲ್ಲಿ ವಿವಾಹವಾದರು. ಆದರೆ ದಂಪತಿಗಳು ಕೆಲವು ವರ್ಷಗಳ ಭಿನ್ನಾಭಿಪ್ರಾಯದ ನಂತರ ಅಕ್ಟೋಬರ್ 2021 ರಲ್ಲಿ ವಿಚ್ಚೇದನ ಪಡೆದು ದೂರಾಗಿದ್ದಾರೆ… ವಿಚ್ಛೇದನದ ನಂತರ ಸಮಂತಾ ಒಂಟಿಯಾಗಿ ಜೀವನ ನಡೆಸುತ್ತಿದ್ದಾರೆ. ಈ ನಡುವೆ ಸಮಂತಾ ಎರಡನೇ ಮದುವೆ ಬಗ್ಗೆ ಸಾಕಷ್ಟು ಸುದ್ದಿ ಹರಿದಾಡ್ತಿದೆ…. ಖ್ಯಾತ ನಿರ್ದೇಶಕನ ಜತೆ ಸಮಂತಾ ಹೆಸರು ತಳುಕು ಹಾಕಿಕೊಂಡಿದೆ.. ಸಮಂತಾ(Samantha) ಮತ್ತೆ ಮದುವೆಯಾಗುವುದಿಲ್ಲ ಎಂದು ಎಲ್ಲೂ ಹೇಳುತ್ತಿಲ್ಲ. ಸಮಂತಾ ಎರಡನೇ ಮದುವೆಯ ಸುದ್ದಿಯೊಂದು ಇದೀಗ ಸಂಚಲನ ಮೂಡಿಸಿದೆ. ಕೆಲ ದಿನಗಳಿಂದ ಬಾಲಿವುಡ್ ನಲ್ಲಿ ನಿರ್ದೇಶಕರೊಬ್ಬರ ಜೊತೆ ಸಮಂತಾ ರಿಲೇಶನ್ ಶಿಪ್ ನಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆ ನಿರ್ದೇಶಕ ಬೇರೆ ಯಾರೂ ಅಲ್ಲ ರಾಜು ನಿಡುಮೋರು. ರಾಜು ನಿಡುಮೋರು ನಿರ್ದೇಶನದ ಸಮಂತಾ ಅಭಿನಯದ ಫ್ಯಾಮಿಲಿ ಮ್ಯಾನ್ ವೆಬ್ ಸಿರೀಸ್‌ನಲ್ಲಿ ಸ್ಯಾಮ್‌ ನಟಿಸಿದ್ದರು.. ಈ ವೇಳೆ ಸ್ನೇಹ ಶುರುವಾಗಿ ಪ್ರೀತಿಗೆ ತಿರುಗಿದ್ದು, ಇವರಿಬ್ಬರು ಬಹಳ ದಿನಗಳಿಂದ ಡೇಟಿಂಗ್…

Read More

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್​ ​ಧೋನಿ(Mahendra Singh Dhoni) ವಿಶ್ವಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ 5 ವರ್ಷಗಳೇ ಕಳೆದಿವೆ. ಆದರೂ ಅವರ ಕ್ರೇಜ್​ ಮಾತ್ರ ಕಡಿಮೆ ಆಗಿಲ್ಲ. ಸದ್ಯ, ಐಪಿಎಲ್​ನಲ್ಲಿ ಮಾತ್ರ ಧೋನಿ ಕಾಣಿಸಿಕೊಳ್ಳುತ್ತಿದ್ದು, ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಧೋನಿ ಅವರ ನಾಯಕತ್ವದಲ್ಲಿ ಭಾರತ 2007ರ ಟಿ20 ವಿಶ್ವಕಪ್, 2011ರ ಏಕದಿನ ವಿಶ್ವಕಪ್ ಮತ್ತು 2013ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಐಸಿಸಿಯ ಮೂರು ಕಪ್ ಗೆದ್ದ ವಿಶ್ವದ ಏಕೈಕ ನಾಯಕ ಎಂಬ ದಾಖಲೆಯನ್ನು ಅವರು ಬರೆದಿದ್ದಾರೆ. ಕೇವಲ ಉತ್ತಮ ನಾಯಕ ಮಾತ್ರವಲ್ಲದೇ ಬೆಸ್ಟ್​ ಫಿನಿಶರ್​ ಜೊತೆಗೆ ಉತ್ತಮ ವಿಕೆಟ್​ ಕೀಪರ್​ ಆಗಿಯೂ ಹಲವಾರು ದಾಖಲೆಗಳನ್ನು ಅವರು ಬರೆದಿದ್ದಾರೆ. ಇದೀಗ ಧೋನಿ ರಾಜಕೀಯ ಎಂಟ್ರಿ ಕೊಡುತ್ತಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಹೌದು, ಹಲವು ವರ್ಷಗಳಿಂದಲೂ ಧೋನಿ ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದೀಗ ಮತ್ತೆ ಈ ವಿಚಾರ ಮುನ್ನಲೆಗೆ ಬಂದಿದೆ. ಆದರೆ ಧೋನಿ…

Read More