Author: vikimasters

ಮೈಸೂರು ಒಡೆಯರ್‌(Wodeyar) ಮನೆತನದ ವಿರುದ್ಧ ಸಮರ ಸಾರಿದ್ದ ಸಿಎಂ ಸಿದ್ದರಾಮಯ್ಯ ಈಗ ಗೆದ್ದು ಬೀಗಿದ್ದಾರೆ.. ಬೆಂಗಳೂರು ಅರಮನೆ (Bangalore Palace) ಆಸ್ತಿ ವಿಚಾರದಲ್ಲಿ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿರುವ ಅರಮನೆಯ ನೂರಾರು ಎಕರೆ ಹಾಗೂ ಕೋಟ್ಯಂತರ ರೂಪಾಯಿ ಆದಾಯ ಸರ್ಕಾರದ ಪಾಲಾಗಿದೆ.. ರಾಜರ ವಿರೋಧದ ಮಧ್ಯೆಯೂ ಸರ್ಕಾರದ ಸುಪರ್ದಿಗೆ ಆಸ್ತಿ!ಮೈಸೂರು ರಾಜಮನೆತನದ ವಿರೋಧದ ಮಧ್ಯೆಯೂ ಸರ್ಕಾರ ಈ ಆದೇಶ ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ. ರಾಜವಂಶಸ್ಥರಿಗೆ ಟಿಡಿಆರ್ ನೀಡದಿರಲು ಸರ್ಕಾರ ನಿರ್ಧರಿಸಿದೆ. ಕಳೆದ ಸಂಪುಟದಲ್ಲಿ ಟಿಡಿಆರ್ ನೀಡದಿರಲು ಸರ್ಕಾರ ತೀರ್ಮಾನಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅರಮನೆ (Bangalore Palace) ಭೂ ಕಬಳಿಕೆ ಮತ್ತು ನಿಯಂತ್ರಣ ಅಧ್ಯಾದೇಶ 2025ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಅರಮನೆಯ ಭೂಮಿ ಎಷ್ಟು ಎಕರೆ? ಆದಾಯ ಎಷ್ಟು..?ರಾಜ್ಯ ಸರ್ಕಾರ ಬೆಂಗಳೂರು ಅರಮನೆಯ (Bangalore Palace) ಆಸ್ತಿಯ ಮೇಲೆ ಹಕ್ಕು ಸಾಧಿಸಿದೆ. ಅರಮನೆಯ ಭೂಮಿ ಮತ್ತು ಅದ್ರಿಂದ ಬರುತ್ತಿದ್ದ ಆದಾಯವನ್ನು…

Read More

ರಾಜ್ಯ ಕಾಂಗ್ರೆಸ್‌ನಲ್ಲೀಗ ಮತ್ತೊಂದು ಸುತ್ತಿನ ವಾರ್ ಶುರುವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌(DK Sivakumar) ಹಾಗೂ ಸಚಿವ ಸತೀಶ್‌ ಜಾರಕಿಹೊಳಿ ಮಧ್ಯೆ ತಣ್ಣಗಾಗಿದ್ದ ಹೊಗೆ ಈಗ ಜ್ವಾಲೆಯಾಗಿ ಧಗಧಗಿಸುತ್ತಿದೆ. ಇದರ ಪರಿಣಾಮ ಏನಾಗಿದೆ ಅಂದ್ರೆ ಬ್ರೇಕ್‌ ಬಿದ್ದಿದ್ದ ಸತೀಶ್‌ ಜಾರಕಿಹೊಳಿಯವರ ದುಬೈ ಪ್ರವಾಸದ ಪ್ಲ್ಯಾನ್‌ ಮತ್ತೆ ಚಾಲ್ತಿಗೆ ಬಂದಿದ್ದು, ಕಾಂಗ್ರೆಸ್‌ ಸರ್ಕಾರದಲ್ಲಿ ಸಂಚಲನ ಸೃಷ್ಟಿಯಾಗಿದೆ. ಡಿಕೆಶಿ-ಸತೀಶ್‌ ಮಧ್ಯೆ ಮತ್ತೊಂದು ಸುತ್ತಿನ ಯುದ್ಧ..‌! ಬೆಳಗಾವಿ ರಾಜಕೀಯಕ್ಕೆ ಡಿಸಿಎಂ ಡಿಕೆಶಿ ಎಂಟ್ರಿ ಕೊಟ್ಟ ಬೆನ್ನಲ್ಲೇ ಬಿರುಸುಗೊಂಡಿದ್ದ ಬಣ ಕಿತ್ತಾಟ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಹೈಕಮಾಂಡ್ ಮಧ್ಯ ಪ್ರವೇಶ ಮತ್ತು ವಾರ್ನಿಂಗ್‌ ಬಳಿಕ ತುಸು ತಣ್ಣಗಾದಂತೆ ಕಂಡಿದ್ದ ಬಣ ಸಂಘರ್ಷ ಈಗ ಮತ್ತೆ ಮುನ್ನೆಲೆಗೆ ಬರುವ ಎಲ್ಲ ಸಾಧ್ಯತೆಗಳು ಗೋಚರಿಸಿವೆ. ಯಾಕಂದ್ರೆ, ಸಚಿವ ಸತೀಶ್(Satish Jarakiholi) ಜಾರಕಿಹೊಳಿ ಬಣದ 15 ಶಾಸಕರ ತಂಡ ತೆರೆ ಮರೆಯಲ್ಲೇ ದುಬೈ ಪ್ರವಾಸಕ್ಕೆ ಸಿದ್ಧತೆ ಮಾಡಿಕೊಂಡಿದೆ ಅನ್ನೋ ವಿಚಾರ ಬೆಳಕಿಗೆ ಬಂದಿದೆ.. ಡಿಕೆಶಿ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ಮುಂದಾದ ಸತೀಶ್‌ ಜಾರಕಿಹೊಳಿಕಾಂಗ್ರೆಸ್‌ನಿಂದ…

Read More

ಉತ್ತರ ಪ್ರದೇಶದ (Uttar Pradesh) ಪ್ರಯಾಗ್‌ ರಾಜ್‌ನಲ್ಲಿ(Prayag Raj) ನಡೆಯುತ್ತಿರುವ ಜಾಗತೀಕ ಮಟ್ಟದ ಹಿಂದೂ ಧರ್ಮದ ಅತ್ಯಂತ ಬೃಹತ್‌ ಉತ್ಸವ ಮಹಾ ಕುಂಭಮೇಳ ಹದಿನಾರು ದಿನಗಳನ್ನು ಯಶಸ್ವಿಯಾಗಿ ಮುಗಿಸಿ ಹದಿನೇಳನೇ ದಿನಕ್ಕೆ ಕಾಲಿಟ್ಟಿದ್ದೆ. ಈವರೆಗೂ ಶಾಂತಿಯುತವಾಗಿ ನಡೆದಿದ್ದ ಮಹಾ ಕುಂಭಮೇಳದಲ್ಲಿ ಇಂದು ಅವಘಡ ಸಂಭವಿಸಿದೆ. ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಪವಿತ್ರ ಸ್ನಾನ ಮಾಡಲು ಕೋಟ್ಯಂತರ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಉತ್ತರ ಪ್ರದೇಶದ (Uttar Pradesh) ಪ್ರಯಾಗ್‌ರಾಜ್‌ನಲ್ಲಿ(Prayag Raj) ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಮಾಘ ಮಾಸದ ಅಮಾವಾಸ್ಯೆ/ ಮೌನಿ ಅಮಾವಾಸ್ಯೆಯ ಇಂದು ಸಂಗಮ್‌ನಲ್ಲಿ ಪುಣ್ಯ ಸ್ನಾನದ ವೇಳೆ ಭಾರೀ ನೂಕುನುಗ್ಗಲು ಉಂಟಾಗಿ ಈ ದುರ್ಘಟನೆಯಲ್ಲಿ ಹಲವಾರು ಗಾಯಗೊಂಡಿದ್ದಾರೆ. ಭಾರತದ ಮೂರು ಪವಿತ್ರ ನದಿಗಳು ಒಟ್ಟಿಗೆ ಸೇರುವ ಈ ಸಂಗಮದಲ್ಲಿ ಮೌನಿ ಅಮಾವಾಸ್ಯೆಯಂದು ಪುಣ್ಯ ಸ್ನಾನಕ್ಕಾಗಿ ಕೋಟ್ಯಾಂತರ ಭಕ್ತಾಧಿಗಳು ಕೂಡ ನೆರೆದಿದ್ದಾರೆ. ಈ ಸಂದರ್ಭದಲ್ಲಿ ಸಂಗಮ್ನಿಂದ ಸುಮಾರು ಒಂದು ಕಿಲೋಮೀಟರ್ ವರೆಗೂ ಜನಸಂದಣಿ ಮಧ್ಯೆ ಬ್ಯಾರಿಕೇಡ್‌ಗಳು ಮುರಿದು ಕೆಲವು ಮಹಿಳೆಯರು…

Read More

ಉತ್ತರಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ 2025ರ ಮಹಾ ಕುಂಭಮೇಳದಲ್ಲಿ (Kumbh Mela)ಕಾಲ್ತುಳಿತ ಸಂಭವಿಸಿ 15ಕ್ಕೂ ಭಕ್ತರು ಜೀವ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಭಕ್ತರು ಮಹಾ ಕುಂಭಮೇಳಕ್ಕೆ(Kumbh Mela) ಭೇಟಿ ನೀಡುತ್ತಿದ್ದಾರೆ. ಇದರಿಂದ ಪ್ರಯಾಗ್​ರಾಜ್​ನ ಸಂಗಮ್ ಪ್ರದೇಶದಲ್ಲಿ ರಾತ್ರಿ 2 ಗಂಟೆ ಸುಮಾರಿಗೆ ಏಕಾಏಕಿ ಜನರು ನುಗ್ಗಿಕೊಂಡು ಬಂದಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ ಸುಮಾರು 15ಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಇದರ ಜೊತೆಗೆ ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಂಬ್ಯುಲೆನ್ಸ್​ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಹಲವಾರು ಜನರು ತಮ್ಮ ತಮ್ಮ ಸಂಬಂಧಿಗಳನ್ನು ಕಳೆದುಕೊಂಡು ದುಃಖಿಸುತ್ತಿದ್ದಾರೆ. ಜನರು ಏಕಾಏಕಿ ನುಗ್ಗಿಕೊಂಡು ಬಂದಿದ್ದರಿಂದ ತಮ್ಮವರು ನಾಪತ್ತೆ ಆಗಿದ್ದಾರೆ ಎಂದು ಕೆಲವರು ಅಳುತ್ತ ದೂರು ಹೇಳುತ್ತಿದ್ದಾರೆ. ಪೊಲೀಸರು ಈ ಬಗ್ಗೆ ಕ್ರಮ ತೆಗೆದುಕೊಂಡಿದ್ದು ಪ್ರಯಾಗ್​ರಾಜ್ ಕಡೆಗೆ ತೆರಳುವ ವಾಹನಗಳನ್ನು ಕೆಲ ಸಮಯ ತಡೆದಿದ್ದಾರೆ…

Read More

ಹೇಗಿದ್ದೀಯಾ ಕಂದಾ.. ನಾನು ಜೊತೆಗಿಲ್ಲ ಅಂತಾ ಬೇಜಾರಾಗಿದ್ದೀಯಾ..? ಎಷ್ಟು ಚೆನ್ನಾಗಿ ಕಾಣ್ತೀಯ ನೋಡು.. ನಿನ್ನ ಮೇಲೆ ಯಾರ ದೃಷ್ಟಿನೂ ಬೀಳದೇ ಇರಲಿ.. ಯಾವುದಕ್ಕೂ ತಲೆಕೆಡಿಸಿಕೊಳ್ಬೇಡ ಮಗಾ.. ನಾನು ನಿನ್ನ ಬೆನ್ನ ಹಿಂದೆಯೇ ಇರ್ತೀನಿ. ಹೀಗೆ ನಗುತ್ತಾ.. ನಗಿಸ್ತಾ ಖುಷಿಯಾಗಿರುವ ಕಂದ ಅಂತಾ ಬಿಗ್‌ಬಾಸ್‌ ಪರದೆ ಮೇಲೆ ಮನಮಿಡಿಯುವ ಹಾಡು ಕೇಳಿ ಬಂತು.. ಅಷ್ಟೇ.. ಅಭಿನಯ ಚಕ್ರವರ್ತಿ ಸುದೀಪ್‌ ಕಣ್ಣಾಲಿಗಳು ಒದ್ದೆಯಾಗಿದ್ದವು. ಸುದೀಪ್‌ ಮಗಳು ಸಾನ್ವಿ ಕಣ್ಣಲ್ಲಿ ನೀರು ಜಿನುಗಿತ್ತು.. ನೆರೆದಿದ್ದ ಪ್ರೇಕ್ಷಕರ ಹೃದಯ ಕಲಕಿದಂತಾಗಿತ್ತು.. ನಿಜ.. ಬಿಗ್‌ಬಾಸ್‌ ಸೀಸನ್‌ 11 ಗ್ರಾಂಡ್‌ ಫಿನಾಲೆ (Bigg boss season 11 grand finale) ಎಲ್ಲರ ಹೃದಯ ಸ್ಪರ್ಶಿಸಿದೆ.. ಆ ಮನ ಮಿಡಿಯುವ ಕ್ಷಣಗಳು ಎಲ್ಲರನ್ನೂ ಒಂದು ಕ್ಷಣ ಮಂತ್ರಮುಗ್ದರನ್ನಾಗಿಸಿತ್ತು.. ಯಾಕಂದ್ರೆ, ಬಾರದೂರಿಗೆ ಪಯಣಿಸಿರುವ ಕಿಚ್ಚನ ಪ್ರೀತಿಯ ತಾಯಿ, ಮತ್ತೆ ಮರಳಿ ಬಂದಂತ್ತಿತ್ತು.. ಪುಟ್ಟ ಬಾಲಕನೊಬ್ಬ ವೇದಿಕೆ ಮೇಲೆ ಅಮ್ಮಾ ಅಮ್ಮಾ ಅಂತಾ ಹಾಡು ಹಾಡುತ್ತಿದ್ರೆ, ದಿಢೀರ್‌ ಪ್ರತ್ಯಕ್ಷವಾದ ಅಮ್ಮ ನಾನಿದ್ದೀನಿ ಮಗನೇ ಹೆದರಬೇಡ…

Read More

ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಆವೃತ್ತಿಗೆ ಇನ್ನು ಎರಡು ತಿಂಗಳು ಬಾಕಿ ಇದ್ದು, ಎಲ್ಲಾ ತಂಡಗಳು ಈಗಾಗಲೇ ಸಿದ್ಧತೆ ಆರಂಭಿಸಿವೆ. ಐಪಿಎಲ್‌ (IPL)ಆರಂಭವಾಗುವ ಮುನ್ನ ಚಾಂಪಿಯನ್ಸ್ ಟ್ರೋಫಿ, ಮಹಿಳಾ ಪ್ರೀಮಿಯರ್ ಲೀಗ್‌ ಕೂಡ ನಡೆಯುವುದರಿಂದ ಇನ್ನು ನಾಲ್ಕು ತಿಂಗಳು ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ಸಿಗಲಿದೆ. ಐಪಿಎಲ್ ಎಂದರೆ ಅಲ್ಲಿ ಪರಸ್ಪರ ಕಾಲೆಳೆಯುವುದು, ಜಗಳ ಸಾಮಾನ್ಯ ಎನ್ನುವಂತಾಗಿದೆ. ವಿವಿಧ ತಂಡಗಳ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಿತ್ತಾಡಿಕೊಳ್ಳುವುದು, ಟ್ರೋಲ್ ಮಾಡುವುದು ಮಾಮೂಲು. ಆದರೆ ಕೆಲವೊಮ್ಮೆ ಕ್ರಿಕೆಟಿಗರು ಕೂಡ ಎದುರಾಳಿ ತಂಡವನ್ನು ಟ್ರೋಲ್ ಮಾಡುವುದನ್ನು ನೋಡಬಹುದು. ಈಗ ದೆಹಲಿ ಸ್ಟಾರ್ ಆಟಗಾರ ಕೂಡ ಆರ್‌ಸಿಬಿಯನ್ನು ಟ್ರೋಲ್ ಮಾಡಿದ್ದಾರೆ. ಕುಲದೀಪ್(Kuldeep) ಯಾದವ್ ಕಳೆದ ವರ್ಷದ ಅಕ್ಟೋಬರ್ ತಿಂಗಳಿನಿಂದ ಭಾರತ ತಂಡಕ್ಕಾಗಿ ಆಡಿಲ್ಲ. ಗಾಯಗೊಂಡಿದ್ದ ಅವರು ಚೇತರಿಸಿಕೊಳ್ಳುತ್ತಿದ್ದಾರೆ, ಕ್ರಿಕೆಟ್‌ನಿಂದ ಹೊರುಗುಳಿದಿದ್ದರು ಕುಲದೀಪ್ ಯಾದವ್‌ ಫುಟ್‌ಬಾಲ್ ಪಂದ್ಯಗಳ ನೇರಪ್ರಸಾರದಲ್ಲಿ ಭಾಗವಹಿಸಿದ್ದಾರೆ. ಈ ಸಮಯದಲ್ಲಿ ಅವರು ಆರ್ ಸಿಬಿ ಅಭಿಮಾನಿಗೆ ನೀಡಿರುವ ಪ್ರತಿಕ್ರಿಯೆ ವೈರಲ್ ಆಗಿದೆ. ಟಾಕ್ ಫುಟ್‌ಬಾಲ್ ಎನ್ನುವ…

Read More

ಬಿಗ್‌ಬಾಸ್ ವಿನ್ನರ್ ಹನುಮಂತ (Hanumantu)ಗೆದ್ದ ಹಣದಲ್ಲಿ ಮಾಡುವ ಕೆಲಸ ಇದೇ ಅಂತೆ…! ಕನ್ನಡದ ಅತಿ ದೊಡ್ಡ ರಿಯಾಲಿಟಿ ಷೋ ಬಿಗ್ ಬಾಸ್ ಸೀಸನ್ 11 (Bigg boss season 11)ಮುಕ್ತಾಯಗೊಂಡಿದೆ. ಆರಂಭದಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಮಾಡುತ್ತಿದ್ದ ಬಿಗ್ ಬಾಸ್ ಸೀಸನ್ 11ರ (Bigg boss season 11) ಕಪ್ ಗೆಲ್ಲುವವರು ಯಾರು ಎಂಬ ಕುತೂಹಲ ತೀವ್ರವಾಗಿತ್ತು. ಇದೀಗ ಆ ಕುತೂಹಲ ತಣಿದಿದ್ದು ತೀವ್ರ ಸ್ಪರ್ಧೆಯಿದ್ದ ಆಟದಲ್ಲಿ ಹಳ್ಳಿ ಹೈದ ಹನುಮಂತ ಬಿಗ್ ಬಾಸ್ ಗೆದ್ದು ಇತಿಹಾಸ ಸೃಷ್ಠಿಸಿದ್ದಾರೆ. ಈ ಮೊದಲು ಕೂಡ ಕೆಲವು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದ ಹನುಮಂತ (Hanumantu)ತಮ್ಮ ಹಳ್ಳಿ ಸೊಗಡು ತುಂಬಿದ ಭಾಷೆ ಮತ್ತು ವಿಶಿಷ್ಟ ಮ್ಯಾನರಿಸಂ ಮೂಲಕ ಕನ್ನಡ ಪ್ರೇಕ್ಷಕರ ಮನ ಗೆದ್ದಿದ್ದರು. ಈ ಸಲ ಬಿಗ್ ಬಾಸ್ ಸೀಸನ್ 11ರಲ್ಲೂ ಹನುಮಂತ ಗೆಲ್ಲಬಹುದು ಎನ್ನುವ ಅನುಮಾನವನ್ನು ಹುಟ್ಟುಹಾಕಿದ್ದರು. ಅದೇ ರೀತಿ ಭಾನುವಾರ ನಡೆದ ಫಿನಾಲೆಯಲ್ಲಿ ಹನುಮಂತ ಬಿಗ್ ಬಾಸ್ ಸೀಸನ್ 11ರ ವಿಜಯಿಯಾಗಿ ಹೊರಹೊಮ್ಮಿದ್ದಾರೆ.…

Read More

ಬಿಗ್ ಬಾಸ್ ಕನ್ನಡ ಸೀಸನ್ 11 ರ ಗ್ರ್ಯಾಂಡ್‌ ಫಿನಾಲೆ (Bigg boss kannada season 11 grand finale) ಮುಕ್ತಾಯವಾಗಿದೆ. ಹನುಮಂತನನ್ನು(Hanumanta) ವಿನ್ನರ್ ಎಂದು ಘೋಷಣೆ ಮಾಡಿ ಆಗಿದೆ. ಬಿಗ್‌ ಬಾಸ್‌ ಕನ್ನಡ ಸೀಸನ್‌ ಶುರುವಾಗಿ 4ನೇ ವಾರಕ್ಕ ಹನುಮಂತ (Hanumanta) ಮನೆಯೊಳಗೆ ಎಂಟ್ರಿ ಕೊಟ್ಟರು. ಈಗ ಹೊಸ ದಾಖಲೆಗಳನ್ನು ಬರೆದು ವಿನ್ನರ್‌ ಆಗಿದ್ದಾರೆ. ಬಿಗ್‌ ಬಾಸ್‌ ಇತಿಹಾದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ವೈಲ್ಡ್‌ ಕಾರ್ಡ್‌ ಎಂಟ್ರಿ ಪಡೆದು ಫಿನಾಲೆ ತಲುಪಿದ್ದು ಇಬ್ಬರೇ ಸ್ಪರ್ಧಿಗಳು. ಒಂದು ರಜತ್‌ ಮತ್ತೊಂದು ಹನುಮಂತ(Hanumanta). ಅದರಲ್ಲಿ ಹನುಮಂತ ವಿನ್ನರ್‌ ಕೂಡ ಆಗಿದ್ದು ಬಿಗ್‌ ಬಾಸ್‌ ಕನ್ನಡ ವಿನ್‌ ಆದ ಮೊದಲ ವೈಲ್ಡ್‌ ಕಾರ್ಡ್‌ ಸ್ಪರ್ಧಿ ಎಂಬ ದಾಖಲೆ ಬರೆದರು. ಜೊತೆಗೆ 5 ಕೋಟಿಗೂ ಅಧಿಕ ವೋಡ್‌ ಪಡೆದು ಮತ್ತೊಂದು ದಾಖಲೆ ಸೃಷ್ಟಿಸಿದರು. ಹನುಮಂತ ಬಿಗ್‌ ಬಾಸ್‌ ವಿನ್ನರ್‌ ಆಗ್ತಿದ್ದಂತೆ ಅವರ ಫ್ಯಾನ್ಸ್‌ ಸಂತಸದಲ್ಲಿ ಸಂಭ್ರಮಿಸಿದ್ದಾರೆ. ಬಿಗ್ ಬಾಸ್ ಬಹುಮಾನ ಮೊತ್ತವಾಗಿ ಬರೋಬ್ಬರಿ 50…

Read More

ಭಾರತೀಯ ಕ್ರಿಕೆಟ್ ದಂತಕಥೆ ವೀರೇಂದ್ರ ಸೆಹ್ವಾಗ್ (Virender Sehwag) ಮತ್ತು ಅವರ ಪತ್ನಿ ಆರತಿ ಅಹ್ಲಾವತ್ 20 ವರ್ಷಗಳ ದಾಂಪತ್ಯ ಮುರಿದು ಬೀಳಲಿದೆ ಎಂಬ ಸುದ್ದಿ ವೈರಲ್‌ ಆಗಿದೆ… ಎರಡು ದಶಕಗಳ ದಾಂಪತ್ಯವನ್ನ ಕೊನೆಗೊಳಿಸಲು ಇಬ್ಬರೂ ನಿರ್ಧರಿಸಿದ್ದಾರಂತೆ. ಸೆಹ್ವಾಗ್‌ ಹಾಗೂ ಆರತಿ ನಡುವೆ 2000ರ ಆರಂಭದಲ್ಲಿ ಪ್ರೇಮ ಕಥೆ ಶುರುವಾಗಿತ್ತು. ಅದ್ಧೂರಿ ವಿವಾಹದೊಂದಿಗೆ ಲವ್‌ಸ್ಟೋರಿಗೆ ಮದುವೆಯ ಮುದ್ರೆ ಹಾಕಿದ್ದರು. ಕುಟುಂಬದ ಆಪ್ತ ಮೂಲಗಳ ಪ್ರಕಾರ, ಈಗಾಗಲೇ ಹಲವು ತಿಂಗಳುಗಳಿಂದ ಇಬ್ಬರೂ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದಾರಂತೆ. ಶೀಘ್ರದಲ್ಲಿಯೇ ಇಬ್ಬರ ವಿಚ್ಛೇದನ ಖಚಿತವಾಗಬಹುದು ಎನ್ನಲಾಗಿದೆ. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. 2007ರಲ್ಲಿ ಹಿರಿಯ ಪುತ್ರ ಆರ್ಯವೀರ್‌ ಜನಿಸಿದ್ದರೆ, 2010ರಲ್ಲಿ 2ನೇ ಪುತ್ರ ವೇದಾಂತ್‌ ಜನಿಸಿದ್ದ. ದೀರ್ಘ ಅವಧಿಯ ಕಾಲ ಜೊತೆಯಾಗಿಯೇ ಸಂಸಾರ ಮಾಡಿದ್ದರೂ, ಇತ್ತೀಚಿನ ಬೆಳವಣಿಗಳು ಇವರಿಬ್ಬರ ನಡುವಿನ ಅಂತರ ದೊಡ್ಡ ಮಟ್ಟದಲ್ಲಿ ಹೆಚ್ಚಾಗಿದೆಯಂತೆ. ಕಳೆದ ವರ್ಷದ ದೀಪಾವಳಿ ಸಂಭ್ರಮದಲ್ಲೂ ವೀರೇಂದ್ರ ಸೆಹ್ವಾಗ್‌ (Virender Sehwag) ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ಫೋಟೋದಲ್ಲಿ ಅವರ…

Read More

ಇಂದು ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್‌ India-England)ನಡುವಿನ ಮೊದಲ ಟಿ-ಟ್ವೆಂಟಿ ಪಂದ್ಯಕ್ಕೆ ಎರಡೂ ತಂಡಗಳು ರೆಡಿಯಾಗಿವೆ. 5 ಮ್ಯಾಚ್‌ಗಳ ಈ ಸರಣಿಯಲ್ಲಿ ಇಂಗ್ಲೆಂಡ್‌ ತಂಡವನ್ನು ಬಗ್ಗು ಬಡಿಯಲು ಸೂರ್ಯಕುಮಾರ್‌ ಯಾದವ್‌(Suryakumar Yadav) ನೇತೃತ್ವದ ಟೀಮ್‌ ಇಂಡಿಯಾ(Team India) ಯುವ ಪಡೆ ತಯಾರಿ ಮಾಡಿಕೊಂಡಿದೆ. ಕೋಲ್ಕತ್ತದ ಈಡನ್‌ ಗಾರ್ಡನ್‌ನಲ್ಲಿ ನಡೆಯೋ ಈ ಮ್ಯಾಚ್‌ಗೆ ಆಡುವ 11 ಆಟಗಾರರ ಹೆಸರನ್ನು ಇಂಗ್ಲೆಂಡ್‌ ಈಗಾಗಲೇ ಫೈನಲ್‌ ಮಾಡಿದೆ. ಅದರಲ್ಲಿ ಮೂವರು ಆರ್‌ಸಿಬಿ ಆಟಗಾರರೇ ಇದ್ದು ಆರ್‌ಸಿಬಿ(RCB) ಅಭಿಮಾನಿಗಳಂತೂ ಇವರ ಆಟ ನೋಡೋಕೆ ಕಾಯ್ತಿದ್ದಾರೆ ಈಗಾಗಲೇ ಶ್ರೀಲಂಕಾ, ದಕ್ಷಿಣ ಆಫ್ರಿಕಾ ಸೇರಿ ಹಲವು ಟೂರ್ನಮೆಂಟ್‌ಗಳನ್ನು ಗೆದ್ದು ಟೀಮ್‌ ಇಂಡಿಯಾ (Team India) ಜೋಶ್‌ನಲ್ಲಿದೆ. ಕ್ಯಾಪ್ಟನ್‌ ಸೂರ್ಯಕುಮಾರ್‌ ಯಾದವ್‌(Suryakumar Yadav) ಮಾತ್ರವಲ್ಲದೆ ಹಾರ್ದಿಕ್‌ ಪಾಂಡ್ಯಾ, ಸಂಜು ಸ್ಯಾಮ್ಸನ್‌, ತಿಲಕ್‌ ವರ್ಮಾ, ಅಭಿಶೇಕ್‌ ಶರ್ಮಾ, ಅಕ್ಷರ್‌ ಪಟೇಲ್‌, ಅರ್ಶದೀಪ್‌ ಸಿಂಗ್‌ ಹೀಗೆ ಎಲ್ಲ ಆಟಗಾರರು ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಯುವ ಆಟಗಾರರ ಪರ್ಫಾರ್ಮೆನ್ಸ್‌ ಮೇಲೆ ಕೋಚ್‌ ಗಂಭೀರ್‌ ಕಣ್ಣಿಟ್ಟು ಮಾರ್ಗದರ್ಶನ ಮಾಡ್ತಿದ್ದಾರೆ.…

Read More