ಸರ್ಕಾರದಿಂದಲೇ ಇನ್ನು ಮುಂದೆ ಆಂಬ್ಯುಲೆನ್ಸ್ ಸೇವೆ ನೀಡಲು ನಿರ್ಧರಿಸಿದೆ. 108 ಅಂಬುಲೆನ್ಸ್ ಸೇವೆಯನ್ನು (108 Ambulence Service) ಇನ್ನು ಮುಂದೆ ರಾಜ್ಯ ಸರ್ಕಾರವೇ ನಿರ್ವಹಣೆ ಮಾಡಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತನಾಡಿದ ಅವರು, 108 ಅಂಬುಲೆನ್ಸ್ ಸೇವೆ ಇನ್ನು ಮುಂದೆ ಸರ್ಕಾರವೇ ನಿರ್ವಹಣೆ ಮಾಡಲಿದೆ. ಖಾಸಗಿ ಅವರಿಂದ ನಾವು ಹೊರಗೆ ಬರುವ ತೀರ್ಮಾನ ಮಾಡಿದ್ದೇವೆ. ಖಾಸಗಿ ಅವರಿಗೆ ಕೊಡುವ ವ್ಯವಸ್ಥೆಯಲ್ಲಿ ಅನೇಕ ಸಮಸ್ಯೆ ಆಗುತ್ತಿತ್ತು. ಹೀಗಾಗಿ ನಾವೇ ಇದನ್ನು ನಿರ್ವಹಣೆ ಮಾಡಲು ನಿರ್ಧಾರ ಮಾಡಿದ್ದೇವೆ. ನಾವೇ ನಿರ್ವಹಣೆ ಮಾಡಿದರೆ ಸರ್ಕಾರಕ್ಕೆ ಹಣ ಉಳಿತಾಯ ಆಗುತ್ತದೆ ಎಂದರು.
ಯಾವುದೇ ಏಜೆನ್ಸಿ ಮೂಲಕ ಕಾರ್ಯನಿರ್ವಹಿಸದೆ ಸರ್ಕಾರವೇ ಇನ್ನು ಮುಂದೆ 108 ಆ್ಯಂಬುಲೆನ್ಸ್ ಸೇವೆ ಒದಗಿಸುತ್ತದೆ. ಈಗಾಗಲೇ ಚಾಮರಾಜನಗರದಲ್ಲಿ ಟ್ರಯಲ್ ಆಗಿದೆ.. ಸಂಪೂರ್ಣ ಸೇವೆ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇನ್ನು 108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವ ವಿಚಾರ ಏಜೆನ್ಸಿ ಮೂಲಕ ನಡೆಯುತ್ತದೆ. ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದರು. 2-3 ತಿಂಗಳಲ್ಲಿ ಈ ಪ್ರಕ್ರಿಯೆ ಶುರು ಮಾಡುತ್ತೇವೆ ಎಂದು ತಿಳಿಸಿದರು.
