ದಾವಣಗೆರೆ: ಶಾಮನೂರು ಶಿವಶಂಕರಪ್ಪ (Shamanuru Shivashankarappa) ಇತ್ತೀಚಿಗಷ್ಟೇ ಇಹಲೋಕ ತ್ಯಜಿಸಿದ್ದರು. ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ (Davangere South Constituency) ಉಪಚುನಾವಣೆಗೆ (ByElection) ಜಿಲ್ಲಾ ಚುನಾವಣಾಧಿಕಾರಿ ಸಿದ್ಧತೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ ಅಧಿಕಾರಿಗಳ ಜೊತೆ ಸಭೆ ನಡೆಸಿ, ಈ ಕುರಿತು ತಿಳಿಸಿದ್ದಾರೆ. ಜನವರಿ 3 ರಂದು ಮತದಾರರ ಪಟ್ಟಿ ಪರಿಷ್ಕರಣೆ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಮತದಾರರ ಪಟ್ಟಿಗೆ ಆಕ್ಷೇಪ ಸಲ್ಲಿಸಲು ಜನವರಿ 24ರ ವರೆಗೆ ಕಾಲಾವಕಾಶ ಇರುತ್ತದೆ. ಫೆಬ್ರವರಿ 14 ರಂದು ಅಂತಿಮ ಮತದಾರರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 217 ಮತಗಟ್ಟೆಗಳಿವೆ. 2,31062 ಮತದಾರರಿದ್ದಾರೆ. ಹೀಗಾಗಿ ಚುನಾವಣೆ ಸಿದ್ಧತೆ ಆರಂಭವಾಗಿದೆ ಎಂದು ಹೇಳಿದ್ದಾರೆ.
