ಕಾರವಾರ: ಪೀಠೋಪಕರಣ (Furniture Store) ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್‌ (Short Circuit) ಉಂಟಾದ ಪರಿಣಾಮ ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಘಟನೆಯೊಂದು ನಡೆದಿದೆ.

ಈ ಘಟನೆ ಉತ್ತರ ಕನ್ನಡ(Uttara Kannada) ಜಿಲ್ಲೆಯ ಮುಂಡಗೋಡ(Mundagodu)ದ ಕಿಲ್ಲೆ ಓಣಿಯ ಖಾದರ್ಲಿಂಕ್ ಹತ್ತಿರ ನಡೆದಿದೆ. ಕಿಲ್ಲೆ ಓಣಿಯ ಯೂನುಸ್ ಹೊಸಕೊಪ್ಪ ಎಂಬ ವ್ಯಕ್ತಿಗೆ ಸೇರಿದ್ದ ಪೀಠೋಪಕರಣದ ಮಹಿಳೆ ಹಾಗೂ ಅಯಾನ್ ಹಾನಗಲ್ ಎಂಬುವರಿಗೆ ಸೇರಿದ ಹಾರ್ಡವೇರ್ ಮಳಿಗೆಗೆಳಿಗೆ ಬೆಂಕಿ ತಗುಲಿದ್ದು, ಸುಮಾರು 50 ಲಕ್ಷ ರೂ.ಗೂ ಅಧಿಕ ಪ್ರಮಾಣದ ನಷ್ಟ ಉಂಟಾಗಿದೆ.

ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ಬೆಲೆಬಾಳುವ ಕಟ್ಟಿಗೆ ತುಂಡು, ಪೀಠೋಪಕರಣ ಹಾಗೂ ಕಾರು ಬೆಂಕಿಗೆ ಆಹುತಿಯಾಗಿವೆ. ಅಲ್ಲದೇ, ಅಕ್ಕಪಕ್ಕದ ಮಳಿಗೆಗಳಿಗೂ ಬೆಂಕಿ ಆವರಿಸುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದ್ದಾರೆ. ಹೀಗಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share.
Leave A Reply