Site icon BosstvKannada

ರಾಜಣ್ಣ ಕೇಸ್ ಬಗ್ಗೆ ನನಗೇನು ಗೊತ್ತಿಲ್ಲ.. ನನಗೂ ಆ ಕೇಸ್‌ಗೂ ಸಂಬಂಧವಿಲ್ಲ – ಡಿಸಿಎಂ ಡಿ.ಕೆ ಶಿವಕುಮಾರ್‌

ಸಚಿವ ರಾಜಣ್ಣ ಹನಿಟ್ರ‍್ಯಾಪ್ ಕೇಸ್ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಸಚಿವ ರಾಜಣ್ಣ ಹನಿಟ್ರ‍್ಯಾಪ್ ಕೇಸ್ ನಲ್ಲಿ ಸಾಕ್ಷಿ ಆಧಾರ ಕೊರತೆಯಿಂದ ಕೇಸ್ ಕ್ಲೋಸ್ ಆಗಿರೋ ವಿಚಾರಕ್ಕೆ ಅವರು ಪ್ರತಿಕ್ರಿಯೆ ನೀಡಿದರು.ರಾಜಣ್ಣ ಕೇಸ್ ಬಗ್ಗೆ ನನಗೇನು ಗೊತ್ತಿಲ್ಲ. ನಿಮ್ಮ ಬಾಯಿಂದನೇ ಇವೆಲ್ಲ ಕೇಳುತ್ತಿರೋದು. ನನಗೂ ಆ ಕೇಸ್‌ಗೂ ಏನು ಸಂಬಂಧವಿಲ್ಲ. ಯಾರು ದೂರು ಕೊಟ್ಟರು ಗೊತ್ತಿಲ್ಲ. ತನಿಖೆ ಆಗಿದ್ದು ನನಗೆ ಗೊತ್ತಿಲ್ಲ. ನನಗೇನು ಅದರ ಬಗ್ಗೆ ಗೊತ್ತಿಲ್ಲ ಎಂದರು.

ಆಗಸ್ಟ್ 5ರಂದು ರಾಹುಲ್ ಗಾಂಧಿ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ರಾಜ್ಯದಲ್ಲಿ ಮತ್ತು ದೇಶದಲ್ಲಿ ಬಿಜೆಪಿ ಅವರು ಯಾವ ರೀತಿ ಅಧಿಕಾರ ದುರುಪಯೋಗ ಮಾಡಿಕೊಂಡು, ಎಲೆಕ್ಷನ್ ಕಮಿಷನ್ ಉಪಯೋಗ ಮಾಡಿಕೊಂಡು ಹೆಚ್ಚು ಕಡಿಮೆ ಮಾಡಿದ್ರು ಅನ್ನೋದನ್ನ ನಾವು ಬೆಳಕಿಗೆ ತರಬೇಕಿದೆ. ನಮ್ಮ ಪಕ್ಷದಿಂದ ಈ ಬಗ್ಗೆ ರಿಸರ್ಚ್ ಆಗಿದೆ. ನಮ್ಮ ನಾಯಕರು ರಾಜ್ಯದ ಜನತೆಗೆ ಈ ವಿಚಾರವನ್ನು ತಿಳಿಸುತ್ತಾರೆ. ನೀವು, ನಾವು ಎಚ್ಚರಿಕೆ ವಹಿಸಬೇಕು ಅನ್ನೋ ದೃಷ್ಟಿಯಿಂದ ನಾವು ಪ್ರತಿಭಟನೆ ಮಾಡ್ತಿದ್ದೇವೆ ಎಂದಿದ್ದಾರೆ.

ಈಗ ದೇಶದಲ್ಲಿ ಆಗಿರೋದು ಆಗಿ ಹೋಗಿದೆ. ಆದ್ರೆ ಈ ವಿಚಾರ ಜನರಿಗೆ ಗೊತ್ತಾಗಬೇಕು. ಅದಕ್ಕೆ ರಾಹುಲ್ ಗಾಂಧಿ ಬರುತ್ತಿದ್ದಾರೆ. ನಿನ್ನೆ ಪ್ರಾಥಮಿಕ ಸಭೆ ಆಗಿದೆ. ಇವತ್ತು ಸುರ್ಜೇವಾಲ, ವೇಣುಗೋಪಾಲ್ ಬರುತ್ತಿದ್ದಾರೆ ಎಂದು ಹೇಳಿದ್ದಾರೆ. ರ‍್ಯಾಲಿ ಮಾಡಬೇಕಾ? ಸಮಾವೇಶ ಮಾಡಬೇಕಾ ಎಂದು ಚರ್ಚೆ ಇದೆ. ಕೋರ್ಟ್ ತೀರ್ಪು ಕೂಡಾ ಪ್ರತಿಭಟನೆ, ರ‍್ಯಾಲಿಗೆ ಸಂಬಂಧಿಸಿದಂತೆ ಇದೆ. ನಮ್ಮ ಸರ್ಕಾರದ ಆದೇಶ ಇದೆ. ಇದರ ಬಗ್ಗೆ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಸಿಎಂ ಜೊತೆ ಡೆಲ್ಲಿಯವರು ಮಾತಾಡಿದ್ದಾರೆ. ನಾನು ಮಾತಾಡಿದ್ದೇನೆ ಅಂತ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯವರು ಅಧಿಕಾರ ದುರುಪಯೋಗ, ಚುನಾವಣೆ ಆಯೋಗದ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಜನರಿಗೆ ತಿಳಿಸಲು ರಾಹುಲ್ ಗಾಂಧಿ ಪ್ರತಿಭಟನೆ ಮಾಡ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Exit mobile version