ಬಹುಭಾಷಾ ನಟ ಕಮಲ್ ಹಾಸನ್ (Kamal Haasan) ತಮ್ಮ ನಟನೆಯ ‘ಥಗ್ ಲೈಫ್’ ಸಿನಿಮಾ ಪ್ರಚಾರ ಮಾಡುವ ವೇಳೆ ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬರ್ಥದಲ್ಲಿ ಅವರು ಮಾತನಾಡಿರುವುದು ಸದ್ಯ ಚರ್ಚೆಗೆ ಗ್ರಾಸವಾಗಿದೆ. ಕಮಲ್ ಹಾಸನ್ ಅವರ ಹೇಳಿಕೆಯನ್ನು ಕನ್ನಡ ಪರ ಸಂಘಟನೆಗಳು ಖಂಡಿಸಿ ನಟ ಕಮಲ್ ಹಾಸನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Also Read: RCBಗೆ ವಿಲನ್ ಆದ ರಿಷಬ್ ಪಂತ್...!
ಇದೀಗ, ನಟ ಕಮಲ್ ಹಾಸನ್ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಟ ಕಮಲ್ ಹಾಸನ್ ಅವರಿಗೆ ಕನ್ನಡದ ಇತಿಹಾಸದ ಬಗ್ಗೆ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಈ ವಿಚಾರದಲ್ಲಿ ಅಹಿಂಸಾ ಚೇತನ್ ಅವರು ಟ್ವೀಟ್ ಮಾಡಿದ್ದು, ಕಮಲ್ ಹಾಸನ್ ಹೇಳಿಕೆ ತಪ್ಪು ಎಂದು ಖಂಡಿಸಿದ್ದಾರೆ