Site icon BosstvKannada

ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ : ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ಸ್ಯಾಂಡಲ್‌ವುಡ್‌ ನಟಿಯರು

ಕನ್ನಡದ ಖ್ಯಾತ ನಟರಾದ ದಿವಂಗತ ಡಾ. ವಿಷ್ಣುವರ್ಧನ್ ಹಾಗೂ ಡಾ. ಬಿ. ಸರೋಜಾದೇವಿ ಅವರಿಗೆ ಕರ್ನಾಟಕ ಸರಕಾರವು ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದ್ದಾರೆ.

ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ ಈ ಮಹತ್ವದ ನಿರ್ಧಾರವನ್ನ ಕೈಗೊಳ್ಳಲಾಯಿತು. ಕನ್ನಡ ಚಿತ್ರರಂಗದ ಮೇರು ನಟನಾದ ಸಾಹಸ ಸಿಂಹ ಡಾ.ವಿಷ್ಣುವರ್ಧನ್‌ ಅವರಿಗೆ ಹಾಗೂ ಕನ್ನಡದ ಖ್ಯಾತ ನಟಿ ಅಭಿನಯ ಸರಸ್ವತಿ ಬಿ.ಸರೋಜಾದೇವಿಯವರಿಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ಪ್ರಶಸ್ತಿ ಘೋಷಿಸಲಾಯಿತು. ಈ ಹಿನ್ನೆಲೆ ಇಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರ ಸದಾಶಿವನಗರದ ನಿವಾಸಕ್ಕೆ ನಟಿಯರಾದ ಮಾಜಿ ಸಚಿವೆ ಜಯಮಾಲಾ, ಶ್ರುತಿ ಹಾಗೂ ಮಾಳವಿಕಾ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು.

ಇನ್ನು ಈ ಹಿಂದೆಯೂ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನ ಭೇಟಿ ಮಾಡಿ ವಿಷ್ಣುವರ್ಧನ್‌ ಹಾಗೂ ಬಿ ಸರೋಜಾದೇವಿಯವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ನಟಿಯರು ಮನವಿ ಪತ್ರ ಸಲ್ಲಿಸಿದ್ರು.

Read Also : ಸಾಹಸ ಸಿಂಹ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ!

Exit mobile version