ಮಹಾರಾಷ್ಟ್ರದಲ್ಲಿ ಮಾಲೇಗಾಂವ್ನಲ್ಲಿ ಬಾಂಬ್ ಬ್ಲ್ಯಾಸ್ಟ್ ಪ್ರಕರಣದ ತೀರ್ಪು ಹೊರಬಿದ್ದಿದೆ.. ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಂಗ್ ಸೇರಿ ಆರು ಆರೋಪಿಗಳಿಗೆ ಎನ್ಐಎ ಸ್ಪೆಷಲ್ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಎಲ್ಲಾ 7 ಆರೋಪಿಗಳನ್ನು ಖುಲಾಸೆಗೊಳಿಸಿ ವಿಶೇಷ ಎನ್ಐಎ ಕೋರ್ಟ್ ತೀರ್ಪು ನೀಡಿದೆ.
ಪ್ರಕರಣದಲ್ಲಿ ಮಾಜಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್ ಹಾಗೂ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. 2008ರ ಸೆಪ್ಟೆಂಬರ್ 29ರಂದು ಮಹಾರಾಷ್ಟ್ರದ ಸಮುದಾಯ ಸೂಕ್ಷ್ಮ ಪ್ರದೇಶವಾಗಿದ್ದ ಮಾಲೆಗಾಂವ್ನಲ್ಲಿ ರಂಜಾನ್ ಮಾಸದಲ್ಲಿ, ನವರಾತ್ರಿ ಮುನ್ನಾ ದಿನ ಈ ಸ್ಫೋಟ ನಡೆದಿತ್ತು. ಈ ವೇಳೆ 6 ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ. ಕಾರಣ, ಯಾವುದೇ ಧರ್ಮವೂ ಹಿಂಸೆಯನ್ನು ಪ್ರತಿಪಾದಿಸುವುದಿಲ್ಲ. ನ್ಯಾಯಾಲಯವು ಕೇವಲ ಗ್ರಹಿಕೆ ಮತ್ತು ನೈತಿಕ ಪುರಾವೆಗಳ ಮೇಲೆ ಯಾರನ್ನೂ ಶಿಕ್ಷೆಗೆ ಒಳಪಡಿಸಲು ಸಾಧ್ಯವಿಲ್ಲ. ಬಲವಾದ ಪುರಾವೆ ಬೇಕು ಅಂತಾ ಕೋರ್ಟ್ ತಿಳಿಸಿದೆ.
